ಕುಂದಾಪುರ: ಡಾ. ಶ್ಯಾಮ ಪ್ರಸಾದ್ ಮುಖರ್ಜಿಯ ತಿಥಿಯ ಅಂಗವಾಗಿ ಬಿಜೆಪಿ ಕುಂದಾಪುರ ಯುವಮೋರ್ಚಾ ವತಿಯಿಂದ ಕುಂದಾಪುರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಪೇಟೆ ಆಂಜನೇಯ ದೇವಸ್ಥಾನದ ವಠಾರದಲ್ಲಿ ಸಾಂಕೇತಿಕವಾಗಿ ಸಸಿಗಳನ್ನು ನೆಡಲಾಯಿತು.
ಮಂಡಲ ಅಧ್ಯಕ್ಷ ಶಂಕರ್ ಅಂಕದಕಟ್ಟೆ,ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಯುವಮೋರ್ಚಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್, ಶಾಂತಿನಿಕೇತನ್,ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಪ್ರಧಾನ ಕಾರ್ಯದರ್ಶಿ ಸುನಿಲ್ಖಾರ್ವಿ ಉಪಸ್ತಿತರಿದ್ದರು.