ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ವ್ರಕ್ಷಾಪರೋಹಣಕ್ಕೆ ಚಾಲನೆ

ಉಡುಪಿ: ಡಾ. ಶ್ಯಾಮಪ್ರಸಾದ್ ಮುಖರ್ಜಿಯ ಬಲಿದಾನದ ದಿನ ಮತ್ತು ಜನ್ಮ ದಿನದ ನೆನಪಿಗಾಗಿ 14 ದಿನಗಳ ಪರ್ಯಂತ ಉಡುಪಿ ಜಿಲ್ಲೆಯಾದ್ಯಂತ ಪಕ್ಷದ ವತಿಯಿಂದ ಸಸಿ ನೆಡುವ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡು ವ್ರಕ್ಷಾಪರೋಹಣ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣದ ಪರಿಸರದಲ್ಲಿ ಸಸಿ ನೆಡುವ ಮೂಲಕ ವ್ರಕ್ಷಾಪರೋಹಣ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ರೈಲ್ವೆ ಇಂಜಿನಿಯರ್ ವೆಂಕಟೇಶ್, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಡಿಸೋಜ, ಬಿಜೆಪಿ ಉಡುಪಿ ನಗರ ಪ್ರಶಿಕ್ಷಣ ವರ್ಗ ಸಂಚಾಲಕ ಲೋಕಯ್ಯ, ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುಜಾಲಾ ಸತೀಶ್, ಸುಧಾ ಪೈ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಪೂರ್ಣಿಮಾ ರತ್ನಾಕರ್ ಮಾಯಾ ಕಾಮತ್, ದಯಾಶಿನಿ, ಲೈಲಾ ಪ್ರಭಾವತಿ, ರಶ್ಮಿ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply