ತುರ್ತು ಪರಿಸ್ಥಿತಿಯಲ್ಲಿ ಜೈಲುವಾಸ ಅನುಭವಿಸಿದ ಉಡುಪಿ ನಗರದ ಹಿರಿಯರಿಗೆ ಬಿಜೆಪಿ ಉಡುಪಿಯಿಂದ ಗೌರವ

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ ಆಶ್ರಯದಲ್ಲಿ ತುರ್ತು ಪರಿಸ್ಥಿತಿ ಸಮಯದಲ್ಲಿ ಜೈಲುವಾಸ ಅನುಭವಿಸಿದ ಉಡುಪಿ ನಗರ ಭಾಗದ ಹಿರಿಯರಿಗೆ ಶುಕ್ರವಾರದಂದು ಗೌರವಾರ್ಪಣೆ.

ಪಕ್ಷದ ಹಿರಿಯರು ಮತ್ತು ಮಾರ್ಗದರ್ಶಕರಾದ ಸೋಮಶೇಖರ್ ಭಟ್ ಗೆ ಅವರ ಮನೆಯಲ್ಲಿ ಬೆಳಿಗ್ಗೆ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಗೌರವಾರ್ಪಣೆ ನಡೆಯಿತು. 

ಬಿಜೆಪಿ ಜಿಲ್ಲಾಧ್ಯಕ್ಷ ಕೆ ಸುರೇಶ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್,ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ನಾಯಕ್,ಉಡುಪಿ ನಗರ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ,ನಗರ ಸಭೆ ಸದಸ್ಯೆ ರಶ್ಮಿ ಭಟ್,ಮಂಜುನಾಥ್,ಸುಂದರ ಕಲ್ಮಾಡಿ, ದಿನೇಶ್, ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply