ಬ್ರಹ್ಮಾವರ ಸಕ್ಕರೆ ಕಾರ್ಖಾನೆ: ಸಚಿವ ಕೋಟ, ಶಾಸಕ ಹಾಲಾಡಿ ಬೆಂಬಲ .

ಬ್ರಹ್ಮಾವರ :ನೆನೆಗುದಿಗೆ ಬಿದ್ದಿರುವ ದ ಕ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿರುವ ನೂತನ ಆಡಳಿತ ಮಂಡಳಿಯ ಎಲ್ಲಾ ಪ್ರಾಮಾಣಿಕ ಪ್ರಯತ್ನಕ್ಕೆ ನಮ್ಮ ಬೆಂಬಲ ಇದೆ ಎಂದು ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಸಚಿವ ರಾದ ಕೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ ಎಂದು ಕಾರ್ಖಾನೆಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ .
 ಸರಕಾರದ ಸಾಲ ಮನ್ನಾ ಹಾಗೂ ನೂತನ ಯೋಜನೆಗೆ ನೂರು ಕೋಟಿ ಬಿಡುಗಡೆಗೆ ಮನವಿ: ಸಕ್ಕರೆ ಕಾರ್ಖಾನೆಯ ನಿಯೋಗ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರನ್ನು ಭೇಟಿಯಾಗಿ  ಸಮಾಲೋಚನೆ ನಡೆಸಿ ಸರಕಾರದ ಸಾಲವನ್ನು ಮನ್ನಾಮಾಡಿ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಈ ಸಾಲಿನ ಬಜೆಟ್ ನಲ್ಲಿ ನೂರು ಕೋಟಿ ರುಪಾಯಿಯನ್ನು ಕಾಯ್ದಿರಿಸಬೇಕಾಗಿ ಮನವಿಯನ್ನು ಅರ್ಪಿಸಲಾಯಿತು .ಈ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಭರವಸೆಯನ್ನು ನೀಡಿದರು. 
ಕಬ್ಬು ಬೆಳೆಗೆ ಯೋಜನೆ ರೂಪಿಸಿ ~ ಹಾಲಾಡಿ: ಸಕ್ಕರೆ ಕಾರ್ಖಾನೆಯ ಪುನರ್ ನಿರ್ಮಾಣಕ್ಕೆ ಪೂರಕವಾದ ಕಬ್ಬು ಬೆಳೆಯನ್ನು ಉಡುಪಿ ಜಿಲ್ಲೆಯಾದ್ಯಂತ ಬೆಳೆಸಬೇಕಾಗಿದ್ದು ಸದ್ಯದ ಪರಿಸ್ಥಿತಿಯಲ್ಲಿ ರೈತರಿಗೆ ಲಾಭದಾಯಕವಾಗಿರುವ ಕಬ್ಬು ಬೆಳೆಯನ್ನು ಬೆಳೆಯಲು ಪ್ರೋತ್ಸಾಹಿಸಿ ರೈತರಿಗೆ ಜಾಗೃತಿ ಮೂಡಿಸುವಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು ಕಾರ್ಖಾನೆಯ ನಿಯೋಗದಲ್ಲಿ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ ಉಪಾಧ್ಯಕ್ಷರಾದ ಉಮಾನಾಥ ಶೆಟ್ಟಿ, ನಿರ್ದೇಶಕರಾದ ಆಸ್ತಿಕ ಶಾಸ್ತ್ರಿ ,ಸನ್ಮತ್ ಕುಮಾರ್ ಹೆಗ್ಡೆ, ಗೀತಾ ಶಂಭು ಪೂಜಾರಿ ವ್ಯವಸ್ಥಾಪಕರಾದ ಗೋಪಾಲಕೃಷ್ಣ ಉಪಸ್ಥಿತರಿದ್ದರು
 
 
 
 
 
 
 
 
 
 
 

Leave a Reply