ಉಡುಪಿ: ವೃದ್ಧರೊಬ್ಬರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಮುಂಡ್ಕೂರು ಮುಲ್ಲಡ್ಕ ಎಂಬಲ್ಲಿ ನಡೆದಿದೆ. ಕೃಷ್ಣ ಶೆಟ್ಟಿ ಚಿರತೆ ದಾಳಿಗೆ ಒಳಗಾದವರು.
ಕೃಷ್ಣ ಶೆಟ್ಟಿ ಅವರು ಮುಲ್ಲಡ್ಕದ ರಾಜಶ್ರೀ ರೈಸ್ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ಗಂಭೀರ ಗಾಯಗೊಂಡ ಕೃಷ್ಣ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಪರಿಸರದಲ್ಲಿ ಇನ್ನೆರಡು ಚಿರತೆಗಳು ಓಡಾಡುತ್ತಿವೆ ಅಂತ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಯನ್ನು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.