“ನಶಾ ಮುಕ್ತ ಭಾರತ ಅಭಿಯಾನ ಮತ್ತು ಜಾಗೃತ ಕಾರ್ಯಗಾರದ ಉದ್ಘಾಟನೆ”

ಡಾ. ಜಿ. ಶಂಕರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು. ಉಡುಪಿ ಜಿಲ್ಲಾ ಲೀಡ್ ಕಾಲೇಜು, ಉಡುಪಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಪೋಲೀಸ್ ಇಲಾಖೆ, ಜಿಲ್ಲಾ ಅಂಗವಿಕಲ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಉಡುಪಿ ಇವರ ಜಂಟಿ ಸಹಯೋಗದಿಂದ ನಶಾ ಮುಕ್ತ ಭಾರತ ಅಭಿಯಾನ ಮತ್ತು ಎನ್.ಎಸ್.ಎಸ್. ಸ್ವಯಂಸೇವಕರಿಗೆ ಕಾನೂನು ಜಾಗೃತಿ ಕಾರ್ಯಗಾರ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ಬುಧವಾರ ಪೂರ್ವಹ್ನ ೯:೩೦ಕ್ಕೆ ಜರಗಿತು.

“ಕಳಬೇಡ, ಕೊಲಬೇಡ ಹುಸಿಯ ನುಡಿಯಲು ಬೇಡ” ಎಂಬ ಬಸವಣ್ಣನವರ ವಚನದ ಸಾಲನ್ನು ಪ್ರಸ್ತಾಪಿಸುತ್ತಾ, ಕ್ರಿ.ಶ. ೧೨ನೇ ಶತಮಾನದಲ್ಲಿ ಬಸವಣ್ಣನವರು ಜಾತಿ, ಧರ್ಮ, ಭೇದಗಳ ಕುರಿತು ಜನರಿಗೆ ಅರಿವು ಮೂಡಿಸುವ ಮೂಲಕ ಒಬ್ಬ ಶ್ರೇಷ್ಠ ಮಾನವತವಾದಿ ಆಗಿದ್ದರು ಎಂದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಉಡುಪಿ, ಶ್ರೀ ಶಾಂತವೀರ ಶಿವಪ್ಪ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ಚಿಕಿತ್ಸೆಗಿಂತ ತಡೆಗಟ್ಟುವಿಕೆ ಉತ್ತಮ’ ವಿದ್ಯಾರ್ಥಿಗಳು ಮಾದಕ ವಸ್ತುಗಳಿಗೆ ಬಲಿಯಾಗದೆ, ಕೆಟ್ಟ ವ್ಯಸನಗಳ ದಾಸರಾಗದೆ, ಉತ್ತಮ ವ್ಯಸನಗಳಾದ ಪುಸ್ತಕ ಓದುವುದು, ಉತ್ತಮ ಚಿಂತನೆ, ಒಳ್ಳೆಯ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳಬೇಕು. ಒಂದೇ ವಯಸ್ಸಿನ ಯುವಕರು ಮತ್ತು ಗೆಳೆಯರ ಒತ್ತಡದಿಂದ ಮಾದಕ ವ್ಯಸನದ ದಾಸರಾಗುತ್ತಿದ್ದು ಇವರು ಈ ಹಂತದಿAದ ತಮ್ಮನ್ನು ತಾವೇ ಹೊರತರಬೇಕೆಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ನಶಾ ಮುಕ್ತ ಭಾರತದ ಪರಿಕಲ್ಪನೆಯು ಕೇವಲ ಅಭಿಯಾನ ಮತ್ತು ಕಾರ್ಯಗಾರಗಳಿಂದ ಸಾಧ್ಯವಿಲ್ಲ. ಕಾನೂನಿನ ಅರಿವು, ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಅಳವಡಿಕೆಯಾಗಿ ಅಧ್ಯಯನದ ವಿಷಯವಾಗಬೇಕು. ಧ್ಯಾನ, ಯೋಗ ಮತ್ತು ಕ್ರೀಡಾ ಚಟುವಟಿಕೆಗಳಿಂದ ಮಾಧಕ ವ್ಯಸನಿಗಳ ಮಾನಸಿಕ ಬದಲಾವಣೆ ಸಾಧ್ಯ ಎಂದು ಶರ್ಮಿಳಾ ಎಸ್. ಹಿರಿಯ ಸಿವಿಲ್ ನ್ಯಾಯಧೀಶರು ಉಡುಪಿ ಇವರು ಮುಖ್ಯ ಅತಿಥಿಗಳಾಗಿ ಕಾನೂನಿನ ಅರಿವಿನ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಆರೋಗ್ಯವಂತ ಭಾರತಕ್ಕೆ ಆರೋಗ್ಯವಂತ ಯುವಜನತೆಯ ಕೊಡುಗೆ ಮುಖ್ಯವಾದುದು. ಯುವಜನತೆ ಮುಕ್ತ ಮನಸ್ಸನ್ನು ಹೊಂದಿಕೊoಡು ಆರೋಗ್ಯವಂತ ಚಿಂತನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವ್ಯವಸ್ಥಿತ ಸಮಾಜ ನಿರ್ಮಾಣದ ಜವಾಬ್ದಾರಿಯನ್ನು ನಿಭಾಯಿಸಬೇಕೆಂದು ಕಾರ್ಯಕ್ರಮದ ಅಧ್ಯಕ್ಷರು ಡಾ. ಭಾಸ್ಕರ ಶೆಟ್ಟಿ ಎಸ್. ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದರು.

ಕು. ನಿಧಿ ಪೋಲೀಸ್ ಸಬ್ ಇನ್ಸ್ಪೆಕ್ಟರ್, ಮಣಿಪಾಲ ಇವರು ಎನ್.ಎಸ್.ಎಸ್. ಸ್ವಯಂ ಸೇವಕರಿಗೆ ಜಿಲ್ಲಾ ಮಟ್ಟದ ನಶಾ ಮುಕ್ತ ಭಾರತ ಅಭಿಯಾನ ಮತ್ತು ಜಾಗೃತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಜಿಲ್ಲೆಯ ಬೇರೆ ಬೇರೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಶ್ರೀ. ಸೋಜನ್ ಕೆ.ಜಿ. ಸಂಚಾಲಕರು ಐಕ್ಯೂಎಸಿ, ಶ್ರೀಮತಿ ಶುಭಾ ಬಿ.ಎಸ್. ಸಂಚಾಲಕರು ಮಾದಕ ದ್ರವ್ಯ ವ್ಯಸನ ತಡೆ ಸಮಿತಿ, ಡಾ. ರಾಜೇಂದ್ರ ಕೆ. ಮತ್ತು ಕು. ರಮ್ಯ ವಿ., ಸಂಚಾಲಕರು ರಾಷ್ಟಿçÃಯ ಸೇವಾ ಯೋಜನೆ ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಡಾ. ವಾಣಿ ಆರ್ ಬಲ್ಲಾಳ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಅತಿಥಿಗಳನ್ನು ಸ್ವಾಗತಿಸಿದರು. ಕು. ಗೌರಿ, ದ್ವಿತೀಯ ಬಿ.ಕಾಂ. ಕಾರ್ಯಕ್ರಮವನ್ನು ನಿರೂಪಿಸಿ, ಕು. ರಿತಿಕಾ ದ್ವಿತೀಯ ಬಿ.ಕಾಂ. ವಂದಿಸಿದರು.

 
 
 
 
 
 
 
 
 

Leave a Reply