ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿಮಿಟೆಡ್ ವತಿಯಿಂದ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರಿಗೆ ಪಾದಪೂಜೆ

ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಶ್ರೀ ಪುತ್ತಿಗೆ ಮಠ, ಉಡುಪಿ ಇವರ ಪಾದಪೂಜೆಯನ್ನು ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ಅಧ್ಯಕ್ಷರಾದ ಶ್ರೀ ಎಚ್. ಜಯಪ್ರಕಾಶ್ ಕೆದ್ಲಾಯ ದಂಪತಿಗಳು ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ವಾಮೀಜಿಯವರು ತಮ್ಮ ವಿಶ್ವ ಗೀತಾ ಪರ್ಯಾಯ ಮಹೋತ್ಸವಕ್ಕೆ ಸ್ವಾಗತಿಸಿ ಎಲ್ಲರ ಸಹಕಾರವನ್ನು ಬಯಸಿದರು. ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ಪಿ. ರಾಘವೇಂದ್ರ ಭಟ್, ನಿರ್ದೇಶಕರಾದ ಶ್ರೀ ಪಿ. ಎನ್. ರವೀಂದ್ರ ರಾವ್, ಶ್ರೀಮತಿ ಮನೋರಮಾ ಎಸ್., ಶ್ರೀ ಎನ್. ಪ್ರಹ್ಲಾದ್ ಬಲ್ಲಾಳ್, ಶ್ರೀ ಭಾಸ್ಕರ ರಾವ್ ಕಿದಿಯೂರು, ಶ್ರೀ ಸೂರ್ಯಪ್ರಕಾಶ್ ರಾವ್ ಎನ್., ಶ್ರೀ ಕೆ. ಮುರಳೀಧರ ಭಟ್, ಶ್ರೀ ಜಗನ್ನಾಥ್ ಜಿ., ಶ್ರೀ ಜಯಪ್ರಕಾಶ ಭಂಡಾರಿ, ಶ್ರೀ ದೇವದಾಸ್, ಶ್ರೀಮತಿ ರೂಪಾ ಮೋಹನ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ವಿಷ್ಣುಮೂರ್ತಿ ಆಚಾರ್ಯ, ಸಹಾಯಕ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಎ. ರಾಘವೇಂದ್ರ ಹೆಬ್ಬಾರ್, ಮುಖ್ಯ ಸಲಹೆಗಾರರಾದ ಶ್ರೀ ಎಸ್. ಕುಮಾರಸ್ವಾಮಿ ಉಡುಪ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ನಂತರ ಸ್ವಾಮೀಜಿಯವರು ಫಲ ಮಂತ್ರಾಕ್ಷತೆಯನ್ನು ಆಡಳಿತ ಮಂಡಳಿಯವರಿಗೆ ಹಾಗೂ ಬ್ಯಾಂಕಿನ ಸರ್ವ ಸಿಬ್ಬಂದಿಗಳಿಗೆ ನೀಡಿ ಆಶೀರ್ವಚಿಸಿದರು.

 
 
 
 
 
 
 
 
 
 
 

Leave a Reply