ಮಣಿಪಾಲ: ಕೋವಿಡ್ ಸೋಂಕು ದೃಢಪಟ್ಟು ರೋಗ ಲಕ್ಷಣಗಳಿಲ್ಲದೆ ಮನೆಯಲ್ಲಿ ಐಸೋಲೇಷನ್ ಆಗಲು ಸಮಸ್ಯೆ ಇರುವವರಿಗೆ ಮಣಿಪಾಲದ ಎಂ.ಐ.ಟಿ. ಹಾಸ್ಟೆಲ್ ನಲ್ಲಿ ಆರಂಭಿಸಲಾಗಿದೆ.
ಈ ಕೋವಿಡ್ ಕೇರ್ ಸೆಂಟರ್ ಗೆ ಇಂದು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಕೆ ರಘುಪತಿ ಭಟ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಇಲ್ಲಿ ಈಗಾಗಲೇ ದಾಖಲಾದ ಸೋಂಕಿತರಲ್ಲಿ ವಿಚಾರಿಸಿದಾಗ ಅವರು ಕೋವಿಡ್ ಕೇರ್ ಸೆಂಟರ್ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ಡಾ. ವಾಸುದೇವ್,ಡಾ.ಶ್ಯಾಮ್ ರಾವ್ ಮತ್ತು ವೈದ್ಯಕೀಯ ಸಿಬ್ಬಂದಿಯವರು ಉಪಸ್ಥಿತರಿದ್ದರು.