ಉಚ್ಚಿಲ ದಸರಾ ಅಂಗವಾಗಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ

ಉಚ್ಚಿಲ ದಸರಾ ಅಂಗವಾಗಿ ಮಹಾಲಕ್ಷ್ಮೀ ಕೋ- ಆಪರೇಟಿವ್ ಬ್ಯಾಂಕ್ ವತಿಯಿಂದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಹಯೋಗದೊಂದಿಗೆ ಅ. 21ರಂದು ಅಪರಾಹ್ನ 2.30ಕ್ಕೆ ಉಚ್ಚಿಲ ಶಾಲಿನಿ ಡಾ| ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಪೊಣ್ಣು ಪಿಲಿ ನಲಿಕೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ, ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಹುಲಿ ಕುಣಿತದಲ್ಲಿ ಆಸಕ್ತಿ ತೋರುತ್ತಿದ್ದು, ತೆರೆಮರೆಯ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ವೇದಿಕೆ ಕಲ್ಪಿಸಲಾಗಿದೆ. ಆದ್ದರಿಂದ ಮಹಿಳೆಯರು ಈ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಯಶಪಾಲ್ ಸುವರ್ಣ ತಿಳಿಸಿದ್ದಾರೆ.
ಗುಂಪು ಹಾಗೂ ವೈಯಕ್ತಿಕ ನೀರೆ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ಮಹಿಳೆಯರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ವಯಸ್ಸಿನ ಮಿತಿ ಇಲ್ಲ. ತಾಸೆ ಹಾಗೂ ವಾದ್ಯದ ಹಿನ್ನೆಲೆ ಸಂಗೀತ ಒದಗಿಸಲಾಗುವುದು ಹಾಗೂ ವೇಷಭೂಷಣಕ್ಕೆ ಪ್ರಾಶಸ್ತ್ಯ ಇಲ್ಲ.
ಪ್ರತೀ ವಿಭಾಗದಲ್ಲಿ ಪ್ರಥಮ, ದ್ವಿತೀಯ, ತೃತೀಯ ವಿಜೇತರನ್ನು ಆಯ್ಕೆ ಮಾಡಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ನೋಂದಣಿ ಹಾಗೂ ಸ್ಪರ್ಧೆಯ ಹೆಚ್ಚಿನ ಮಾಹಿತಿಗಾಗಿ 9972120332ನ್ನು ಸಂಪರ್ಕಿಸಬಹುದು.
 
 
 
 
 
 
 
 
 
 
 

Leave a Reply