ಉಡುಪಿ: ಬೆಳ್ಳಂ ಬೆಳಗ್ಗೆ ಟ್ರಾಫಿಕ್ ಸಮಸ್ಯೆ ವೀಕ್ಷಿಸಿದ ಡಿಸಿ, ಎಸ್ಪಿ!

ಬುಧವಾರ ಬೆಳಿಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತು ಪೋಲಿಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರರವರ ನೇತೃತ್ವದಲ್ಲಿ ನಗರದ ಹಳೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಕಲ್ಸಂಕ ಜಂಕ್ಷನ್ ಗೆ ಭೇಟಿ ನೀಡಿ ಟ್ರಾಫಿಕ್ ಸಮಸ್ಯೆಯನ್ನು ಕೂಲಂಕಷವಾಗಿ ಗಮನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಗರದಲ್ಲಿ ಟ್ರಾಫಿಕ್ ಒತ್ತಡದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕೆಂದು ಇಂಜಿನಿಯರ್ ನ ಜೊತೆ ಜಂಕ್ಷನ್ ಗಳನ್ನು ಪರಿಶೀಲಿಸಿದ್ದೇವೆ‌. ಮುಖ್ಯ ಯೋಜನೆಯನ್ನು ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಈಗ ತಾತ್ಕಾಲಿಕವಾಗಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದರು

ಈ ಸಂದರ್ಭದಲ್ಲಿ ಉಡುಪಿ ನಗರ ಠಾಣಾಧಿಕಾರಿ ಪ್ರಮೋದ್ ಕುಮಾರ್, ಟ್ರಾಫಿಕ್ ಠಾಣಾಧಿಕಾರಿ ಅಬ್ದುಲ್ ಖಾದರ್,‌ನಗರಸಭೆ ಆಯುಕ್ತ ಉದಯ್, ನಗರಸಭೆ ಅಧಿಕಾರಿ ಯಶವಂತ್, ಹೆದ್ದಾರಿ ಇಂಜಿನಿಯರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply