ವಸ್ತುಗಳ ಖರೀದಿ ನೆಪದಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ತಿರುಗಿದರೆ ವಾಹನ ಸೀಜ್ – ಡಿಸಿ ಜಿ ಜಗದೀಶ್

ಉಡುಪಿ: ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಲಾಕ್ ಡೌನ್ ವೇಳೆ ಜನರು ದಿನಸಿ ಸಾಮಾಗ್ರಿ ಖರೀದಿಯ ನೆಪದಲ್ಲಿ ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ದಿನನಿತ್ಯದ ಅಗತ್ಯ ದಿನಸಿ ವಸ್ತುಗಳು ,ತರಕಾರಿ, ಮತ್ತು ಮೀನು ಖರೀದಿಗೆ ತಮ್ಮ ಮನೆಯ ಸಮೀಪದ ಅಂಗಡಿಗಳಲ್ಲಿ ಸಾರ್ವಜನಿಕರು ಖರೀದಿಸಬೇಕು.ಅನಗತ್ಯವಾಗಿ ವಾಹನಗಳಲ್ಲಿ ಬಂದು ವಸ್ತುಗಳನ್ನು ಖರೀದಿಸಿದರೆ ವಾಹನಗಳನ್ನು ಸೀಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 
 
 
 
 
 
 
 
 
 
 

Leave a Reply