ಜಿಲ್ಲೆಯಲ್ಲಿ ಈಗಾಗಲೇ ಜನರ ಸಹಕಾರ ಮತ್ತು ಅಧಿಕಾರಿಗಳ ಶ್ರಮದಿಂದ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಮದುವೆ ಹಾಗೂ ಇತರ ಕಾರ್ಯಕ್ರಮಗಳಿಗೆ ಪರವಾನಿಗೆ ನೀಡುವಾಗ ಸಂಬಂಧಪಟ್ಟ ಅಧಿಕಾರಿಗಳು ಸರಕಾರದ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ದ ಗಮನವಿಡಲು ಸೂಚಿಸಲಾಗಿದೆ. ಮಾರ್ಗಸೂಚಿ ಉಲ್ಲಂಘನೆ ಬಗ್ಗೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಯ ವಿರುದ್ದ ಕೂಡ ಕ್ರಮ ಕೈಗೊಳ್ಳಲಾಗುವುದು.