ಉಡುಪಿ ಜಿಲ್ಲಾಧಿಕಾರಿಯಿಂದ ಡ್ರೈ ಡೇ ಘೋಷಣೆ

ಉಡುಪಿ : ಗಂಗೊಳ್ಳಿಯಲ್ಲಿ ಅ. 1 ರಂದು ಗೋ ಹತ್ಯೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ವತಿಯಿಂದ,ಗಂಗೊಳ್ಳಿ ಬಂದರಿನಿಂದ ರಾಮಮಂದಿರದ ವರೆಗೆ ಮೆರವಣಿಗೆ ಮಾಡಿ ವೀರೇಶ್ವರ ದೇವಸ್ಥಾನದಲ್ಲಿ ಸಭೆ ನಡೆಯಲಿದೆ.

ಸಮಾರಂಭದಲ್ಲಿ ಸುಮಾರು 5000 ಜನ ಭಾಗವಹಿಸುವ ನಿರೀಕ್ಷೆಯಿದ್ದು, ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು,ತ್ರಾಸಿ, ಗ್ರಾಮದ ವ್ಯಾಪ್ತಿಯಲ್ಲಿನ ಎಲ್ಲಾ ರೀತಿಯ ಮದ್ಯ ಮಾರಾಟದ ಸನ್ನದುಗಳನ್ನು ಬಾರ್ ಅಂಡ್ ರೆಸ್ಟೊರೆಂಟ್, ವೈನ್ ಶಾಪ್ ಗಳನ್ನು ಅ. 1 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ

11ರ ವರೆಗೆ ಸಂಪೂರ್ಣವಾಗಿ ಮುಚ್ಚುವಂತೆ ಸೂಚಿಸಲಾಗಿದೆ. ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ, ಸದ್ರಿ ದಿನವನ್ನು ಡ್ರೈ ಡೇ ಎಂದು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

 
 
 
 
 
 
 
 
 
 
 

Leave a Reply