ಉಡುಪಿ: ನೀರು ಸೇದುವಾಗ ಬಾವಿಗೆ ಬಿದ್ದು ವೃದ್ಧೆ ಸಾವನ್ನಪ್ಪಿರುವ ಘಟನೆ ಕಡಿಯಾಳಿಯಲ್ಲಿ ನಡೆದಿದೆ.ವಸಂತಿ ಶೆಟ್ಟಿ (67) ಮೃತ ವೃದ್ದೆ.
ಅವರು ಕಳೆದ ಒಂದು ತಿಂಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಬಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿದೆ.
ಮಂಗಳವಾರ ಮಧ್ಯಾಹ್ನ ವಸಂತಿ ಶೆಟ್ಟಿ ಅವರು ಮನೆಯ ಬಾವಿಯಿಂದ ನೀರು ತರಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಯ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.