ಗಂಜಿಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಡಲಿ ನಾಡಾಜೆಯಲ್ಲಿ ಜೆಸಿಬಿಯಿಂದ ಮಣ್ಣು ಅಗೆಯುತ್ತಿದ್ದ ವೇಳೆ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿದ್ದು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನಡೆದಿದೆ.
ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್ ಹಾಗೂ ಜೆಸಿಬಿಯ ಮೇಲೆ ಮಣ್ಣು ಬಿದ್ದಿದ್ದು ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ ಇವರು ಮಣ್ಣಿನಡಿಯಲ್ಲಿ ಸಿಲುಕಿ ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಬಜಪೆ ಪೊಲೀಸರು ಆಗಮಿಸಿದರು.ಸ್ಥಳೀಯರು ಹಾಗೂ 2 ಜೆಸಿಬಿ ಸಹಾಯದಿಂದ ಮಣ್ಣನ್ನು ತೆಗೆಯಲಾಯಿತು, ಆದರೆ ಜೆಸಿಬಿ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.