ಬಾವಿಗೆ ಹಾರಿದ ಪತ್ನಿ- ರಕ್ಷಿಸಿಲು ಧಾವಿಸಿದ ಪತಿಯೂ ಸಾವು

ಕಾರ್ಕಳ: ಕ್ಷುಲ್ಲಕ‌ ಕಾರಣಕ್ಕಾಗಿ ದಂಪತಿಗಳ ನಡುವೆ‌ ನಡೆದ ಜಗಳ ಸಾವಿನೊಂದಿಗೆ ಅಂತ್ಯ ಕಂಡಿರುವ ಘಟನೆ ಕಾರ್ಕಳ ತಾಲೂಕು ನಲ್ಲೂರಿನಲ್ಲಿ ನಡೆದಿದೆ.

ಯಲ್ಲಾಪುರ ಮೂಲದ ಇಮ್ಯಾನುಲ್ ಸಿದ್ದಿ (40) ಹಾಗೂ ಯಶೋಧಾ (32) ಎಂಬವರು ಸಾವನ್ನಪ್ಪಿದ ದುರ್ದೈವಿಗಳು ಭಾನುವಾರ ಬೆಳಿಗ್ಗೆ ಟಿವಿ ವಿಚಾರಕ್ಕೆ ಸಂಬಂಧಿಸಿದಂತೆ
ದಂಪತಿಗಳ ಮಧ್ಯೆ ಜಗಳವಾಗಿದ್ದು, ಇದೇ ಕಾರಣಕ್ಕೆ‌‌ ಮನನೊಂದು ಯಶೋಧಾ ತೋಟದಲ್ಲಿದ್ದ ಬಾವಿಗೆ ಹಾರಿದ್ದಾಳೆ. ಪತ್ನಿ ಬಾವಿಗೆ ಹಾರಿದನ್ನು ಕಂಡ ಪತಿ ಆಕೆಯನ್ನು ರಕ್ಷಿಸಲು ನೀರಿಗೆ ದುಮುಕಿದ್ದು ಈ ವೇಳೆ‌ ಈಜು ಬರದ ಹಿನ್ನಲೆಯಲ್ಲಿ ಇಬ್ಬರು ಮುಳುಗಿ ‌ಸಾವನ್ನಪ್ಪಿದ್ದಾರೆ. ಕಳೆದ ಎರಡು ವರ್ಷಗಳಿಂದ ಇಮ್ಯಾನುಲ್, ಯಶೋಧಾ ದಂಪತಿ ನಲ್ಲೂರಿನ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದು. ಇದೀಗ ದಂಪತಿ ಸಾವಿನಿಂದ 10 ವರ್ಷದ ಬಾಲಕ ಹಾಗೂ 9 ವರ್ಷದ ಬಾಲಕಿ ಮಕ್ಕಳು ಅನಾಥರಾಗಿದ್ದಾರೆ.

ಘಟನೆ ಸ್ಥಳಕ್ಕೆ ಡಿವೈಎಸ್‌ಪಿ ಅರವಿಂದ್ ಕಲಗುಜ್ಜಿ ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ತೇಜಸ್ವಿ, ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 
 
 
 
 
 
 
 
 
 
 

Leave a Reply