ಶಿರ್ವ : ಸಿಡಿಲಾಘಾತಕ್ಕೆ ವಿದ್ಯಾರ್ಥಿ ಬಲಿ!

ಶಿರ್ವ ಗ್ರಾಮ ಪಂ.ಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘಾತಕ್ಕೆ ಕಾಲೇಜು ವಿದ್ಯಾರ್ಥಿಯೋರ್ವ ಬಲಿಯಾದ ಘಟನೆ ಗುರುವಾರ ರಾತ್ರಿ ನಡೆದಿದೆ.

ಶಿರ್ವ ಎಂಎಸ್ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ, ಶಿರ್ವ ಮಾಣಿಬೆಟ್ಟು ತೋಟದಮನೆ ನಿವಾಸಿ ರಮೇಶ್ ಪೂಜಾರಿಯವರ ಪುತ್ರ ರಕ್ಷಿತ್ ಪೂಜಾರಿ (20) ಮೃತರು.

ಗುರುವಾರ ಸಂಜೆ ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ. ನೆಲದಲ್ಲಿ ಬಿದ್ದಿದ್ದ ಅವರನ್ನು ಮನೆ ಮಂದಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10 ಗಂಟೆಯ ವೇಳೆಗೆ ಮೃತ ಪಟ್ಟಿದ್ದಾರೆ.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಮೃತ ವಿದ್ಯಾರ್ಥಿಯ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಿಕರಿಗೆ ಸರಕಾರದಿಂದ ಸಿಗುವ ಪರಿಹಾರವನ್ನು ತೆಗೆಸಿಕೊಡಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply