ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜು. 6ರಂದು ಮಲ್ಪೆಗೆ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಜು. 6ರಂದು ಮಲ್ಪೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಮೀನುಗಾರರೊಂದಿಗೆ ಸಭೆ ನಡೆಸಿ, ಅವರ ಸಮಸ್ಯೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. 

ಇಂಧನ ಬೆಲೆ ಏರಿಕೆ,ಮತ್ಸ್ಯ ಕ್ಷಾಮ,ಕೋವಿಡ್ ಸಂಕಷ್ಟ ಮತ್ತು ಲಾಕ್ ಡೌನ್ ನಿರ್ಬಂಧಗಳಿಂದಾಗಿ ಮೀನುಗಾರರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.ಮೀನುಗಾರಿಕೆ ನಡೆಸುವ ಎಲ್ಲಾ ವಿಧದ ಮೀನುಗಾರರು ಮತ್ತು ಮೀನುಗಾರಿಕೆಯನ್ನೇ ನಂಬಿ ಜೀವನ ನಡೆಸುವವರ ಸಮಸ್ಯೆ ಆಲಿಸಲಿದ್ದಾರೆ ಎಂದು ಪ್ರಮೋದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply