ಅ. 2 ರಂದು “ದುರ್ಗಾ ದೌಡ್”

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ಇದರ ವತಿಯಿಂದ 02-10-2022 ರಂದು ಭಾನುವಾರ ಉಡುಪಿ ನಗರದಲ್ಲಿ ನಡೆಯಲಿರುವ “ದುರ್ಗಾ ದೌಡ್” ಹಿಂದೂ ಶಕ್ತಿ ಸಂಚಲನ ಕಾರ್ಯಕ್ರಮ ಯಶಸ್ವಿಗೊಳಿಸುವ ಬಗ್ಗೆ ಇಂದು ದಿನಾಂಕ 24-09-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಗ್ರಾಮ ಪಂಚಾಯತ್ ಅಧ್ಯಕ್ಷರು, ನಗರ ಸಭಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಶಾಸಕರ ಕಚೇರಿ ಉಡುಪಿ ಇಲ್ಲಿ ಪೂರ್ವ ತಯಾರಿ ಬಗ್ಗೆ ಸಭೆ ನಡೆಸಿ ಚರ್ಚಿಸಿದರು.

ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಹಿಂದೂ ಜಾಗರಣ ವೇದಿಕೆ ಪ್ರಾಂತ ಸಹ ಸಂಯೋಜಕರಾದ ಪ್ರಕಾಶ್ ಕುಕ್ಕೆಹಳ್ಳಿ, ಹಿಂದೂ ಜಾಗರಣ ವೇದಿಕೆ ವಿಭಾಗ ಸಹ ಸಂಯೋಜಕರಾದ ಮಹೇಶ್ ಬೈಲೂರು, ಹಿಂದೂ ಜಾಗರಣ ವೇದಿಕೆ ಹಿಂದು ಯುವ ವಾಹಿನಿ ಜಿಲ್ಲಾ ಸಂಯೋಜಕರಾದ ರಿಕೇಶ್ ಕಡೆಕಾರ್ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply