ಟಿ.ಎ.ಪೈ ಪ್ರೌಢಶಾಲೆ, ಕುಂಜಿಬೆಟ್ಟು: ಗಾಂಧೀ ಜಯಂತಿ; ಲಾಲ್‌ಬಹದ್ದೂರ್ ಶಾಸ್ತ್ರಿ ಜಯಂತಿ

ಕುoಜಿಬೆಟ್ಟಿನ ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜರಗಿದ ಗಾಂಧೀ ಜಯಂತಿ ದಿನಾಚರಣೆಯಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಪ್ರಬಂಧಕರಾದ ಶ್ರೀ ದೇವಾನಂದ ಉಪಾಧ್ಯಾಯ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದರು.ಅವರು ಮಾತನಾಡುತ್ತಾ ಮಹಾತ್ಮ ಗಾಂಧಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಯವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮವು ಸರ್ವಧರ್ಮ ಭಜನೆಯೊಂದಿಗೆ ಪ್ರಾರಂಭವಾಯಿತು. ವಿದ್ಯಾರ್ಥಿಗಳಾದ ಕು.ನಿಧಿ ಡಿ ಸುವರ್ಣ ಹಾಗೂ ಕು.ಅದಿತಿ ವಿ ಶೆಟ್ಟಿ ಅನುಕ್ರಮವಾಗಿ ಗಾಂಧಿಜೀ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಬಗ್ಗೆ ಮಾತನಾಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಶೇಟ್, ವಿದ್ಯಾರ್ಥಿ ನಾಯಕ ಶ್ರೀ ಅಶ್ಲೇಷ್ ಭಟ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಮಂಜುನಾಥ ಎ ವಿ ಅತಿಥಿಗಳನ್ನು ಸ್ವಾಗತಿಸಿದರು. ಕು.ಶ್ರೇಯಾ ಶೆಟ್ಟಿಗಾರ್ ಅತಿಥಿಗಳನ್ನು ಪರಿಚಯಿಸಿದರು. ಕು.ಪರಿಣಿಕ ಯು ವಿ ವಂದನಾಪರ್ಣೆಗೈದರು. ಕು. ಮಿಥಾಲಿ ವಿನಾಯಕ ಪೈ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕ ಶ್ರೀ. ಯೊಗೀಶಾ ಕಾರ್ಯಕ್ರಮವನ್ನು ಸಂಯೋಜಿಸಿದರು.

 
 
 
 
 
 
 
 
 
 
 

Leave a Reply