ಮಂಗಳೂರು : ಹೊಟೇಲ್ ರೂಂನಲ್ಲಿ ಬೆಂಕಿ; ಒಳಗಿದ್ದ ವ್ಯಕ್ತಿ ಮೃತ್ಯು!

ಮಂಗಳೂರು ನಗರದ ಬೆಂದೂರ್ ವೆಲ್ ಸಮೀಪದ ಹೊಟೇಲ್ ರೂಂನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಬೆಂಕಿಯಿಂದ ಸುಟ್ಟು ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. 

ಮೃತರನ್ನು ಯಶ್ ರಾಜ್ ಸುವರ್ಣ (43) ಎಂದು ಗುರುತಿಸಲಾಗಿದೆ.

ಯಶ್ ರಾಜ್ ನ.15ರಿಂದ ಈ ಹೊಟೇಲ್ ರೂಂನಲ್ಲಿ ವಾಸವಿದ್ದರು. ನಿನ್ನೆ ಊಟವಾದ ಬಳಿಕ ತಡರಾತ್ರಿ 12 ಗಂಟೆಯ ಸುಮಾರಿಗೆ ಅವರಿದ್ದ ರೂಂನ ಬಾಗಿಲೆಡೆಯಿಂದ ಹೊಗೆ ಹೊರ ಬರುತ್ತಿರುವುದನ್ನು ಲಾಡ್ಜ್ ಸಿಬ್ಬಂದಿ ಗಮನಿಸಿದ್ದಾರೆ. ಮಾಹಿತಿ ಅರಿತು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಒಳಗಿನಿಂದ ಲಾಕ್ ಮಾಡಲಾಗಿದ್ದ ಬಾಗಿಲನ್ನು ತೆರೆದಿದ್ದಾರೆ. ಈ ವೇಳೆ ಯಶ್ ರಾಜ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರೂಂನಲ್ಲಿ ಯಶ್ ರಾಜ್ ಒಬ್ಬಂಟಿಯಾಗಿದ್ದರು.

ಮೃತ ಯಶ್ ರಾಜ್ ತಾಯಿ ಹಾಗೂ ಪತ್ನಿಯನ್ನು ಹೊಂದಿದ್ದು, ಬಿಕರ್ನಕಟ್ಟೆಯ ನಾರ್ತನ್ ಅಪಾರ್ಟ್ಮೆಂಟ್ ನ ನಿವಾಸಿ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 
 
 
 
 
 
 
 
 
 
 

Leave a Reply