ಪ್ರಸಿದ್ಧ ಗಾಯಕ ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಕರ್ನಾಟಕ ಯುವ ರತ್ನ ರಾಜ್ಯ ಪ್ರಶಸ್ತಿ

ದಿನಾಂಕ:05/03/2023 ರ ಭಾನುವಾರ ಶ್ರೀ ವಿಶ್ವನಾಥ ದೇವಾಲಯ ಮೂಲ್ಕಿ ಇಲ್ಲಿ ಏರ್ಪಡಿಸಿದ 13 ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ಶ್ರೀ ವಿದ್ಯಾಲಯ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ , ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು , ಪುನರೂರು ಪ್ರತಿಷ್ಠಾನ ಹಾಗೂ ಪುನರೂರು ಡೇಕಾರೇಟ್ ಇವರ ಸಂಯುಕ್ತ ಆಶ್ರಯದಲ್ಲಿ ನಾಡಿನ ಪ್ರಸಿದ್ಧ ಗಾಯಕ / ಸಂಘಟಕರಾದ ಡಾ.ಗಣೇಶ್ ಗಂಗೊಳ್ಳಿ ಅವರಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ಹರಿಕೃಷ್ಣ ಪುನರೂರು ಅವರು, ಕರ್ನಾಟಕ ಯುವ ರತ್ನ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಸಂಯೋಜಕರು ಹಾಗೂ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರಾಜ್ಯಾಧ್ಯಕ್ಷರಾದ ಡಾ.ಶೇಖರ್ ಅಜೆಕಾರು. ಕಿನ್ನಿಗೋಳಿ ಯುಗ ಪುರುಷ ಸಂಸ್ಥೆಯ ಅಧ್ಯಕ್ಷರಾದ ಭುನಾಭಿರಾಮ ಉಡುಪ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply