ಉಡುಪಿ ಗ್ರಾಮಾಂತರ ಬಿಜೆಪಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ

ಉಡುಪಿ : ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಜೀ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ ಅಭಿಯಾನದ” ಅಂಗವಾಗಿ ಭಾನುವಾರ ಭಾರತೀಯ ಜನತಾ ಪಾರ್ಟಿ ಉಡುಪಿ ಗ್ರಾಮಾಂತರ, ಯುವ ಮೋರ್ಚಾ ಗ್ರಾಮಾಂತರದ ಸಹಯೋಗದೊಂದಿಗೆ ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಕಾರ್ಲ್ ಜೈಸ್ ಇಂಡಿಯಾ (ಬೆಂಗಳೂರು) ಪ್ರೈವೇಟ್ ಲಿಮಿಟೆಡ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆರ್. ಕೆ. ಪಾಟ್ಕರ್ ಹಿರಿಯ ಪ್ರಾಥಮಿಕ ಶಾಲೆ ಮುಂಡ್ಕಿನಜೆಡ್ಡುವಿನಲ್ಲಿ “ಕಣ್ಣಿನ ಉಚಿತ ತಪಾಸಣೆ, ಉಚಿತ ಶಸ್ತ್ರಚಿಕಿತ್ಸೆ, ನೇತ್ರದಾನ ನೊಂದಣಿ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಶಾಸಕ ಕೆ. ರಘುಪತಿ ಉದ್ಘಾಟಿಸಿದರು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೇತ್ರ ತಪಾಸಣೆಗೆ ಚಾಲನೆ ನೀಡಿ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ವೀಣಾ ವಿ. ನಾಯ್ಕ್ ವಹಿಸಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೂ ವೀಣಾ ಶೆಟ್ಟಿ, ಚೇರ್ಕಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮನೋಜ್ ಶೆಟ್ಟಿ, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಗ್ರಾಮಾಂತರ ಯುವಮೋರ್ಚಾ ಅಧ್ಯಕ್ಷರಾದ ಗಣೇಶ್ ಸೂರಾಲು, ಚೇರ್ಕಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಖಾ ಭಟ್, ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ, ವಾರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮಹೇಂದ್ರ ಕುಮಾರ್, ಪ್ರಸಾದ ನೇತ್ರಾಲಯ ವೈದ್ಯಕೀಯ ನಿರ್ದೇಶಕ ನಾಡೋಜ ಡಾ.ಕೃಷ್ಣ ಪ್ರಸಾದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಡುಪಿ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ ಸ್ವಾಗತಿಸಿದರು. ಗ್ರಾಮಾಂತರ ಯುವ ಮೋರ್ಚಾದ ಅಧ್ಯಕ್ಷ ಗಣೇಶ್ ಸೂರಾಲು ವಂದಿಸಿದರು. ಉಡುಪಿ ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ‌ಗಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

ಒಟ್ಟು 355 ಫಲಾನುಭವಿಗಳು ಇದರ ಉಪಯೋಗ ಪಡೆದರು, 222 ಜನರಿಗೆ ದಿನಾಂಕ 19-10-2021 ರಂದು ಉಚಿತ ಕನ್ನಡಕ ವಿತರಿಸಲಾಗುವುದು, ಹಾಗೂ 44 ಜನರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುವುದು.

 
 
 
 
 
 
 
 
 
 
 

Leave a Reply