ಹಿಂದೂ ರುದ್ರ ಭೂಮಿ ಸ್ವಾಗತ ಗೋಪುರ – ಶಾಸಕ ರಘುಪತಿ ಭಟ್ ಉದ್ಘಾಟನೆ

ಮಲ್ಪೆ : ಹಿಂದೂ ರುದ್ರ ಭೂಮಿಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಶಾಸಕ ಕೆ. ರಘುಪತಿ ಭಟ್ ಶಿಫಾರಸ್ಸಿನ ಮೇರೆಗೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯಿಂದ ರೂ. 5.00 ಲಕ್ಷ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಶುಕ್ರವಾರದಂದು ಶಾಸಕ ಕೆ. ರಘುಪತಿ ಭಟ್ ದೀಪ ಬೆಳಗಿಸುವುದರ ಮೂಲಕ ಸ್ವಾಗತ ಗೋಪುರವನ್ನು ಉದ್ಘಾಟಿಸಿದರು.

ಉಡುಪಿ ನಗರ ಸಭಾಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯ ವಿಜಯ್ ಕುಂದರ್, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಶರತ್ ಬೈಲಕೆರೆ, ಮಲ್ಪೆ ಹಿಂದೂ ರುದ್ರ ಭೂಮಿ ಸಮಿತಿಯ ಅಧ್ಯಕ್ಷ ಪಾಂಡುರಂಗ, ಕಾರ್ಯದರ್ಶಿ ಮಂಜು ಕೊಳ, ಹಾಗೂ ಪದಾಧಿಕಾರಿಗಳು, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply