ಜನ್ನಾಡಿ ಕೊರಗರ ಕಾಲೋನಿಯಲ್ಲಿ 15 ಮನೆಗಳ ನಿರ್ಮಾಣಕ್ಕೆ ಶಿಲಾನ್ಯಾಸ.

ಉಡುಪಿ : ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ (ರಿ.), ಬೆಂಗಳೂರು ಸಂಸ್ಥೆಯ ವತಿಯಿಂದ 15 ಬಡ ಕೊರಗ ಕುಟುಂಬಕ್ಕೆ ನೂತನ ಮನೆಗಳನ್ನು ನಿರ್ಮಿಸಿ
ಕೊಡುತ್ತಿದ್ದು, ಇದರ ಶಿಲಾನ್ಯಾಸ ಕಾರ್ಯಕ್ರಮವು ಕುಂದಾಪುರ ತಾಲೂಕಿನ ಜನ್ನಾಡಿಯ ಕೊರಗರ ಕಾಲೋನಿಯಲ್ಲಿ ಮಾರ್ಚ್ 21, 2024 ಗುರುವಾರದಂದು
ಪೂರ್ವಾಹ್ನ ೧೦.೦೦ ಗಂಟೆಗೆ ಜರಗಲಿದೆ.

ಪೇಜಾವರ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ದಿವ್ಯ ಹಸ್ತದಿಂದ ಭೂಮಿ ಪೂಜೆ ನೆರವೇರಲಿದೆ.

ಡಾ. ಎಚ್. ಎಸ್. ಶೆಟ್ಟರ ಅಧ್ಯಕ್ಷತೆಯಲ್ಲಿ ಜರಗಲಿರುವ ಕಾರ್ಯಕ್ರಮದಲ್ಲಿ ಕುಂದಾಪುರದ ಮಾಜಿ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಯಕ್ಷಗಾನ ಕಲಾರಂಗದ
ಕಾರ್ಯದರ್ಶಿ ಮುರಲಿ ಕಡೆಕಾರ್ ಉಪಸ್ಥಿತಲಿರುವರು ಎಂಬುದಾಗಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಉಪಾಧ್ಯಕ್ಷರಾದ ಹೆಚ್. ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿ ಡಾ. ಸುಮನಾ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ
ತಿಳಿಸಿರುತ್ತಾರೆ.

 
 
 
 
 
 
 
 
 
 
 

Leave a Reply