ಇಂದ್ರಾಳಿ ಆಂಗ್ಲ ಮಾಧ್ಯಮ ಸಮೂಹ ಶಿಕ್ಷಣ ಸಂಸ್ಥೆಗಳು: ಗಾಂಧಿ, ಶಾಸ್ತ್ರಿ ಜಯಂತಿ

ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ರಾಷ್ಟçಪಿತ ಮಹಾತ್ಮಗಾಂಧಿ ಮತ್ತು
ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಸಂಸ್ಥೆಯ ಸoಚಾಲಕರಾದ ಶ್ರೀ ಕೆ ಅಣ್ಣಪ್ಪ ಶೆಣೈಯವರು ಅಧ್ಯಕ್ಷತೆ ವಹಿಸಿ ಗಾಂಧಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ತ್ಯಾಗ ಮತ್ತು ದೇಶ ಪ್ರೇಮ, ಮತ್ತು ಸರಳತೆ ಕುರಿತು ಮಾತನಾಡಿದರು.

ಸಂಸ್ಥೆಯ ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನೆರವೇರಿತು.
ಈ ಸಂದರ್ಭದಲ್ಲಿ ಶಾಲಾ ಮಂಡಳಿಯ ಸದಸ್ಯರಾದ ಶ್ರೀ ಕೆ.ರತ್ನಾಕರ ಶೆಣೈ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕೆ ವಿನಾಯಕ ಕಿಣಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೇಷ್ಮಾ, ಶಿಕ್ಷಕರು, ಶಿಕ್ಷಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply