ಸೈಂಟ್ ಮೇರೀಸ್ ದ್ವೀಪ ಅಭಿವೃದ್ಧಿ; ಶಾಸಕ-ಅಧಿಕಾರಿಗಳ ಪರಿಶೀಲನೆ

ಪ್ರವಾಸಿಗರ ಆಕರ್ಷಣೆಯ ಸ್ಥಳವಾದ ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಅಭಿವೃದ್ಧಿ, ಇಲ್ಲಿಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ ದ್ವೀಪದ ಸ್ವಚ್ಛತೆ ಸಂಬಂಧ ಅಧಿಕಾರಿಗಳೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 26-09-2022 ರಂದು ಸೈಂಟ್ ಮೇರಿಸ್ ದ್ವೀಪಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ದ್ವೀಪದ ಅಭಿವೃದ್ಧಿಯ ಕುರಿತು ಹಾಗೂ ದ್ವಿಪಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ದ್ವೀಪದ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ಪ್ರಭಾರ ಮಲ್ಪೆ ಪೋಲಿಸ್ ವೃತ್ತ ನಿರೀಕ್ಷಕರಾದ ಮಂಜುನಾಥ್, ಪೋಲಿಸ್ ಉಪ ನಿರೀಕ್ಷಕರಾದ ಶಕ್ತಿವೇಲು, ಸ್ಥಳೀಯರಾದ ಮಂಜು ಕೊಳ ಹಾಗೂ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಯವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply