ಮಂಗಳೂರು : ಉರ್ವಾಸ್ಟೋರ್ ನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜಿಲ್ಲಾ ಮಟ್ಟದ ಡಾ. ಬಿ ಆರ್ ಅಂಬೇಡ್ಕರ್ ಭವನ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.
ಭಾಜಪಾ ರಾಜ್ಯಾಧ್ಯಕ್ಷರೂ, ಸಂಸದರೂ ಆದ ನಳಿನ್ ಕುಮಾರ್ ಕಟೀಲ್, ಸಚಿವ ಎಸ್ ಅಂಗಾರ, ಕೋಟಾ ಶ್ರೀನಿವಾಸ್ ಪೂಜಾರಿ, ಡಾ.ಸುಧಾಕರ್, ಸುನಿಲ್ ಕುಮಾರ್,ಶಾಸಕ ಡಾ.ಭರತ್ ಶೆಟ್ಟಿ ವೇದವ್ಯಾಸ ಕಾಮತ್ ಹಾಗೂ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.