ಮಂಗಳೂರು : ಕಣ್ಣೂರು ವಾರ್ಡಿನ ಗಣೇಶೋತ್ಸವ ಸಮಿತಿಯ ಕಟ್ಟಡದ‌ ಭೂಮಿಪೂಜೆ

ಮಂಗಳೂರು : ಮಹಾನಗರ ಪಾಲಿಕೆಯ ಕಣ್ಣೂರು ವಾರ್ಡಿನ ಗಣೇಶೋತ್ಸವ ಸಮಿತಿಯ ಕಟ್ಟಡದ‌ ಮೇಲ್ಛಾವಣಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿದರು. 

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್, ಕಣ್ಣೂರು ಗಣೇಶೋತ್ಸವ ಸಮಿತಿಯ ಕಟ್ಟಡದ ಮೇಲ್ಛಾವಣಿ ನಿರ್ಮಾಣ ಕಾಮಗಾರಿಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಕಾಮಗಾರಿ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಜಿಲ್ಲಾ ಪ್ರದಾನ ಕಾರ್ಯದರ್ಶಿ ಹಾಗೂ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರ್ , ಸ್ಥಳೀಯ ಕಾರ್ಪೊರೇಟರ್ ಚಂದ್ರಾವತಿ ವಿಶ್ವನಾಥ್ , ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಸಂದೀಪ್ ಗರೋಡಿ , ಬೂತ್ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಯುವ ಮೋರ್ಚಾ ಉಪಾಧ್ಯಕ್ಷರು, ಮಹಿಳಾ ಕಾರ್ಯಕರ್ತರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply