ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿಯಿಂದ ನಿರಾಶ್ರಿತರ ಪುರ್ನವಸತಿ ಕೇಂದ್ರ ಪರಿಶೀಲನೆ

ಉಡುಪಿ : ಬೀಡಿನಗುಡ್ಡೆಯ ನಗರ ವಸತಿ ರಹಿತರ ಆಶ್ರಯ ಕೇಂದ್ರದಲ್ಲಿ ಅವ್ಯವಸ್ಥೆ ಇರುವುದರ ಬಗ್ಗೆ ದೂರುಗಳು ಬಂದಿದ್ದವು.ಈ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯದ ಆದೇಶದ ಮೆರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯೆ ಕಾರ್ಯದರ್ಶಿ, ನ್ಯಾಯಧೀಶೆ ಶರ್ಮಿಳಾ ಎಸ್ ಪುರ್ನವಸತಿ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು. 

ಅಸಮರ್ಪಕ ವ್ಯವಸ್ಥೆಗಳು ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸುವ್ಯವಸ್ಥೆ ಕಾಪಾಡುವಂತೆ ಸಲಹೆ ನೀಡಿದರು. ಎಫ್.ಡಿ.ಎ ಅನಿಲ್, ಪ್ರಾಧಿಕಾರದ ಕಾನೂನು ಸ್ವಯಂಸೇವಕ ನಿತ್ಯಾನಂದ ಒಳಕಾಡು ಸ್ಥಳದಲ್ಲಿದ್ದರು.

 
 
 
 
 
 
 
 
 
 
 

Leave a Reply