ಕಾರ್ಕಳದಲ್ಲಿ ದಂಪತಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದ ಹಿನ್ನೆಲೆಯಲ್ಲಿ ವಯೋವೃದ್ಧ ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನಲ್ಲಿ ನಡೆದಿದೆ.ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿ ಕೆ.ಪಿ.ಅನಂತ ಪ್ರಭು ಮತ್ತು ಪತ್ನಿ ಪದ್ಮಾ ಪ್ರಭು ಆತ್ಮಹತ್ಯೆಗೆ ಶರಣಾದವರು.

ಪದ್ಮಾ ಪ್ರಭು ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಈ ಹಿನ್ನೆಲೆ ಮನನೊಂದು ಪತಿ- ಪತ್ನಿ ವಿಷ ಸೇವನೆ ಮಾಡಿದ್ದಾರೆ.ತಕ್ಷಣ ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಂಪತಿಗಳು ಕೆಲವೇ ಗಂಟೆಗಳ ಅಂತರದಲ್ಲಿ ಮೃತಪಟ್ಟಿದ್ದು, ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply