ಕಡಿಯಾಳಿ ದೇಗುಲಕ್ಕೆ ಆಗಮಿಸಿದ ಗೃಹಸಚಿವ ಅರಗ ಜ್ಞಾನೆಂದ್ರ

ಉಡುಪಿ : ಕರ್ನಾಟಕ ರಾಜ್ಯ ಗೃಹ ಸಚಿವ ಆರಗಜ್ಞಾನೆಂದ್ರ ನವರಾತ್ರಿಯ ಪರ್ವಕಾಲದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.

ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಮತ್ತು ಉಡುಪಿಯ ಶಾಸಕ ಕೆ ರಘುಪತಿ ಭಟ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜೀರ್ಣೋದ್ದಾರ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ ರಾಘವೇಂದ್ರ ಕಿಣಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್,ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ನಗರಸಭಾ ಸದಸ್ಯ ಗೀತಾ ಶೇಟ್, ರಜನಿ ಹೆಬ್ಬಾರ್ ವ್ಯವಸ್ಥಾಪನ ಮಂಡಳಿಯ ಸದಸ್ಯ ನಾಗರಾಜಶೆಟ್ಟಿ, ರಮೇಶ್ ಶೇರಿಗಾರ್, ಕಿಶೋರ್ ಸಾಲಿಯಾನ್, ಗಣೇಶ್ ನಾಯ್ಕ, ಸಂಧ್ಯಾ ಪ್ರಭು,ಶಶಿಕಲಾ ಭರತ್, ದೇವಳದ ಸರದಿ ಅರ್ಚಕ ದುರ್ಗಾಪ್ರಸಾದ್ ಉಪಾಧ್ಯಾಯ,ಜೀರ್ಣೋದ್ಧಾರ ಸಮಿತಿಯ ಸದಸ್ಯ ಪದ್ಮ ರತ್ನಾಕರ್, ಭಾರತೀ ಚಂದ್ರಶೇಖರ್ ಇನ್ನಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply