ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ ದಿನಸಿ ಕಿಟ್‌ ವಿತರಣೆ

ಉಡುಪಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ನ ಯುವನಾಯಕ ರಾಹುಲ್ ಗಾಂಧಿಯ ಹುಟ್ಟು ಹಬ್ಬದ ಪ್ರಯುಕ್ತ ಶನಿವಾರ ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ವತಿಯಿಂದ 31ನೇ ಬೈಲೂರು ವಾರ್ಡಿನ ಬಡ ಕುಟುಂಬಗಳಿಗೆ ದಿನಸಿ ಕಿಟ್‌ಗಳನ್ನು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ ನೇತೃತ್ವದಲ್ಲಿ ವಿತರಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್,ಮಹಿಳಾ ಕಾಂಗ್ರೆಸ್‌ನ ಜಯಶ್ರೀ ಶೇಟ್, ರೋಜ, ರೋಶ್ನಿ, ಪ್ರಿಯ, ಸಲ್ಮಾ ಹಾಗೂ ನಗರಸಭಾ ಸದಸ್ಯರು ಮತ್ತು ಪ್ರತಿಪಕ್ಷ ನಾಯಕ ರಮೇಶ್ ಕಾಂಚನ್ ಹಾಗೂ ಸಂಜಯ್ ಆಚಾರ್ಯ ಮತ್ತು ಭವಿಷ್ ಶೆಟ್ಟಿ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply