ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಪೊಸ್ಟ್ ಕಾರ್ಡ್ ಅಭಿಯಾನಕ್ಕೆ ಶಾಸಕ ರಘುಪತಿ ಭಟ್ ಚಾಲನೆ

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ, ಮಹಾಶಕ್ತಿ ಕೇಂದ್ರ ಕರಂಬಳ್ಳಿ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಆಯೋಜಿಸಿದ ಪೋಸ್ಟ್ ಕಾರ್ಡ್ ಅಭಿಯಾನಕ್ಕೆ ಇಂದು ಶಾಸಕ ಕೆ. ರಘುಪತಿ ಭಟ್ ತಮ್ಮ ಸ್ವಗೃಹದಲ್ಲಿ ಚಾಲನೆ ನೀಡಿದರು.

ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕಿಶೋರ್ ಕರಂಬಳ್ಳಿ, ಕರಂಬಳ್ಳಿ ವಾರ್ಡಿನ ನಗರಸಭಾ ಸದಸ್ಯ ಗಿರಿಧರ್ ಕರಂಬಳ್ಳಿ, ಗುಂಡಿಬೈಲು ವಾರ್ಡಿನ ನಗರಸಭಾ ಸದಸ್ಯ ಪ್ರಭಾಕರ್ ಪೂಜಾರಿ, ಕಕ್ಕುಂಜೆ ವಾರ್ಡಿನ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಮೂಡುಸಗ್ರಿ ವಾರ್ಡಿನ ನಗರಸಭಾ ಸದಸ್ಯೆ ಭಾರತಿ ಪ್ರಶಾಂತ್, ನಗರ ಸಭೆಯ ನಾಮ ನಿರ್ದೇಶಿತ ಸದಸ್ಯೆ ಅರುಣಾ ಪೂಜಾರಿ ಹಾಗೂ ಬೂತ್ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply