ಕೋಟ ಶ್ರೀನಿವಾಸ ಪೂಜಾರಿ ಬಗ್ಗೆ ಅವಹೇಳನ: ಜಯಕರ್ನಾಟಕ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಆಕ್ರೋಶ

ಉಡುಪಿ: ಅನಿಲ್ ಕುಮಾರ್ ಶೆಟ್ಟಿ ಪೆರ್ಡೂರು ಎಂಬವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಅಸಭ್ಯವಾಗಿ ಬರೆದು ವೈಯಕ್ತಿಕವಾಗಿ ತೇಜೋವಧೆ ನಡೆಸಿರುವುದು ಖಂಡನೀಯ ಎಂದು ಜಯಕರ್ನಾಟಕ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಕೋಟ ಶ್ರೀನಿವಾಸ ಪೂಜಾರಿಯವರು ರಾಜಕೀಯವಾಗಿ, ವೈಯಕ್ತಿಕವಾಗಿ ಯಾರನ್ನೂ ಅಸಂಬದ್ಧ ಟೀಕೆ ಮಾಡಿದವರಲ್ಲ, ತಮ್ಮ ಜೀವನದಲ್ಲಿ ಯಾವುದೇ ರೀತಿಯ ಕಪ್ಪು ಚುಕ್ಕೆ ಬರುವಂತಹ ಕೆಲಸಗಳನ್ನು ಮಾಡಿದವರಲ್ಲ. ವಿಧಾನ ಪರಿಷತ್ ಸದಸ್ಯರಾಗಿ ಎರಡು ಬಾರಿ ಸಚಿವರಾದವರು. ಇಂತಹ ಉತ್ತಮ ವ್ಯಕ್ತಿತ್ವದ ವ್ಯಕ್ತಿಯ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಜಾತಿ ಸೂಚಕಗಳನ್ನು ಬಳಸಿ ಸಮಾಜದಲ್ಲಿ ದ್ವೇಷದ ವಾತಾವರಣ ನಿರ್ಮಿಸುವಂತಹ ಅಸಭ್ಯವಾದ ಬರಹಗಳನ್ನು ಹಾಕಿರುವುದು ಸರಿಯಲ್ಲ. 

ಈ ರೀತಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದಾತನ ಬಗ್ಗೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಲಾಖೆಗೆ ಸತೀಶ್ಆಗ್ರಹಿಸಿದ್ದು ಸಾರ್ವಜನಿಕವಾಗಿ ಆ ವ್ಯಕ್ತಿ ಕ್ಷಮೆಯಾಚಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಆತನ ಬಗ್ಗೆ ಕಾನೂನಾತ್ಮಕ ಹೋರಾಟದ ಎಚ್ಚರಿಕೆ ನೀಡಿದರು.

 
 
 
 
 
 
 
 
 
 
 

Leave a Reply