ಕೃಷ್ಣಮಠದ ರಾಜಾಂಗಣದಲ್ಲಿ ಶ್ರೀವಿಭುದೇಶತೀರ್ಥ ಶ್ರೀಪಾದರ ಸಂಸ್ಮರಣಾ ಕಾರ್ಯಕ್ರಮ

ಉಡುಪಿ : ಕೃಷ್ಣಮಠದ ರಾಜಾಂಗಣದ ಶ್ರೀನರಹರಿತೀರ್ಥ ವೇದಿಕೆಯಲ್ಲಿ,ಪರ್ಯಾಯ ಅದಮಾರು ಮಠದ ಶ್ರೀವಿಭುದೇಶತೀರ್ಥ ಶ್ರೀಪಾದರ ಆರಾಧನೆಯ ಪ್ರಯುಕ್ತ ಸಂಸ್ಮರಣಾ ಕಾರ್ಯಕ್ರಮವನ್ನು ಅದಮಾರು ಹಿರಿಯ ಮಠಾಧೀಶರಾದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಉದ್ಘಾಟಿಸಿ, ಹೆತ್ತ ತಂದೆ ತಾಯಿ ಮತ್ತು ಹೊತ್ತ ಗುರುಗಳ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕು. 

ನಮ್ಮ ಗುರುಗಳು ಧೈರ್ಯವಂತರು,ಸಮಯಪ್ರಜ್ಞೆ ಹಾಗೂ ಅಪಾರವಾದ ದೇಶಭಕ್ತಿ ಇದ್ದು ಸದೃಢ ದೇಶ ಕಟ್ಟಲು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸಲು ಹಗಲಿರುಳು ಸಾಧಿಸಿ ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡಿ ಸೇವೆಸಲ್ಲಿಸಿದರು.ಅವರು ಹಾಕಿಕೊಟ್ಟ ಸನ್ಮಾರ್ಗದಲ್ಲಿ ನಾವು ಮುನ್ನಡೆಯುತ್ತಿದ್ದೇವೆ ಎಂದರು.

ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮಾತನಾಡಿ ಉಪನಿಷತ್ತಿನ ಬಗ್ಗೆ ಅಪಾರವಾದ ಕಾಳಜಿಯಿದ್ದವರು.ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ನಂತರದ ಕಾಲದಲ್ಲಿದ್ದ ಅವರು, ಇಂಗ್ಲಿಷ್ ಭಾಷೆಯ ಬಗ್ಗೆ ಸಾಮಾನ್ಯ ಜ್ಞಾನ ಇರಬೇಕೆಂಬ ಆಶಯದಿಂದ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ವಿದ್ಯಾವಂತರು ನಮ್ಮ ದೇಶದಲ್ಲಿಯೇ ಉಳಿಯಬೇಕೆಂಬ ಹಂಬಲದಿಂದ ಸಂಶೋಧನಾ ಕೇಂದ್ರ ಆರಂಭಿಸಿದರು. ಅಂತಹ ಶ್ರೇಷ್ಠರ ಚಿಂತನೆಯನ್ನು ಸದಾ ನೆನೆಯುತ್ತಿರುವುದು ನಮ್ಮ ಕರ್ತವ್ಯ ಎಂದರು.

 ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ ವೇದಾಂತ ಹಾಗೂ ವಿಜ್ಞಾನದ ತತ್ವವನ್ನು ಪಡೆದು ಸಾಧಿಸಿದವರು.ಹಳ್ಳಿಯಿಂದ ಡೆಲ್ಲಿಯವರೆಗೆ ವಿದ್ಯಾಲಯಗಳನ್ನು ಸ್ಥಾಪಿಸಿ ಸಹಸ್ರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾರ್ಜನೆ ನೀಡಿದವರು ಎಂದರು.

ಅದಮಾರಿನಂತಹ ಹಳ್ಳಿಯಲ್ಲಿ ಆದರ್ಶ ಗುರುಕುಲವನ್ನು ಸ್ಥಾಪಿಸಿ ವೇದಾಂತ ಅಧ್ಯಯನ ಮಾಡುವವರಿಗೆ ಮಾರ್ಗದರ್ಶಕರಾಗಿದ್ದರು.ಸಂಧ್ಯಾ ಕಾಲೇಜನ್ನು ಆರಂಭಿಸಿ ಹಗಲಲ್ಲಿ ದುಡಿದು, ನಂತರ ಕಾಲೇಜಿಗೆ ಹೋಗಿ ಶಿಕ್ಷಣ ಪಡೆಯುವ ಸಂಧ್ಯಾ ಕಾಲೇಜನ್ನು ತೆರೆದವರು ನಮ್ಮ ಗುರುಗಳು. ನಾವು ಅವರ ಗುರುಕುಲದ ವಿದ್ಯಾರ್ಥಿ ಹಾಗೂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಯಾಗಿದ್ದು ಅವರು ತೋರುತ್ತಿದ್ದ ಪ್ರೀತಿ ಹತ್ತಿರದಿಂದ ಕಂಡವನಾಗಿದ್ದೇನೆ. ಅವರ ಅನುಗ್ರಹ ಪಡೆದ ನಾವೇ ಧನ್ಯರು ಎಂದು ಗುರುಗಳ ಸ್ಮರಣೆ ಮಾಡಿದರು.

 
 
 
 
 
 
 
 
 
 
 

Leave a Reply