ಕೃಷಿ ಅಭಿಯಾನ ಕಾರ್ಯಕ್ರಮ 2021-22 ಕ್ಕೆ ಶಾಸಕ ರಘುಪತಿ ಭಟ್ ಚಾಲನೆ

ಉಡುಪಿ : ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯತ್ ಗಳ ಸಹಯೋಗದಲ್ಲಿ ಇಂದು ಬ್ರಹ್ಮಾವರ ತಾಲೂಕು ಪಂಚಾಯತ್ ಆವರಣದಲ್ಲಿ ಬ್ರಹ್ಮಾವರ ಹೋಬಳಿ ಮಟ್ಟದ “ಕೃಷಿ ಅಭಿಯಾನ ಕಾರ್ಯಕ್ರಮ 2021-22 ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಸಮಗ್ರ ಕೃಷಿ ಮಾಹಿತಿ ರಥ, ಬಳೆ ಸಮೀಕ್ಷೆ ರಥ, ಬೆಳೆ ವಿಮೆ ರಥಕ್ಕೆ ಶಾಸಕ ಕೆ. ರಘುಪತಿ ಭಟ್ ರವರು ಚಾಲನೆ ನೀಡಿ ಕೃಷಿ ಇಲಾಖೆಯ ಕಾರ್ಯಕ್ರಮಗಳ ಮಾಹಿತಿ ಕೈಪಿಡಿಯನ್ನು ಬಿಡುಗಡೆಗೊಳಿಸಿದರು.

ವಾರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ, ಹಂದಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ , ಪಕ್ಷದ ಮುಖಂಡ ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಸಹಾಯಕ ನಿರ್ದೇಶಕ ಮೋಹನ್ ರಾಜ್, ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕ ಡಾ. ಲಕ್ಷ್ಮಣ್, ವಾರಂಬಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

 
 
 
 
 
 
 
 
 
 
 

Leave a Reply