ಪರ್ಯಾಯ ಶ್ರೀ ಕೃಷ್ಣಾಪುರ ಮಠ ಶ್ರೀ ಕೃಷ್ಣ ಮಠ ಉಡುಪಿ ಇದರ ಆಶ್ರಯದಲ್ಲಿ ಹಾಗೂ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದಂಗಳವರ ಆಶೀರ್ವಾದದೊಂದಿಗೆ ಉಡುಪಿಯ ರಾಧಾಕೃಷ್ಣ ನೃತ್ಯ ನಿಕೇತನ (ರಿ.) ನಡೆಸಿದ “ನೃತ್ಯಾರ್ಚನೆ” ಭರತನಾಟ್ಯ ಕಾರ್ಯಕ್ರಮ ಶ್ರೀ ಕೃಷ್ಣ ಮಠದ ಮಧ್ವ ಮಂಟಪದಲ್ಲಿ ಜರಗಿತು.
ಕಾರ್ಯಕ್ರಮವನ್ನು ಸಂಸ್ಥೆಯ ಹಿರಿಯ ಶಿಷ್ಯೆ ವಿದುಷಿ ಡಾ. ರಶ್ಮಿ ಗುರುಮೂರ್ತಿ ಅವರು ಉದ್ಘಾಟಿಸಿದರು. ನಂತರ ಸಂಸ್ಥೆಯ ಕಿರಿಯ ಶಿಷ್ಯವರ್ಗದಿಂದ ಭರತನಾಟ್ಯ ನೃತ್ಯ ಕಾರ್ಯಕ್ರಮ, “ಜಗನ್ಮೋಹನನೇ ಕೃಷ್ಣ” ನೃತ್ಯರೂಪಕ ಪ್ರದರ್ಶಿಸಲಾಯಿತು.
ಈ ಎಲ್ಲಾ ಕಾರ್ಯಕ್ರಮವು ಸಂಸ್ಥೆಯ ನೃತ್ಯ ನಿರ್ದೇಶಕಿ ನೃತ್ಯವಿದುಷಿ ಶ್ರೀಮತಿ ವೀಣಾ ಎಂ. ಸಾಮಗ ಇವರ ನಿರ್ದೇಶನದಲ್ಲಿ ನಡೆಯಿತು.