ಆಗಸ್ಟ್ 1, ರಿಂದ ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತ

ಮಂಗಳೂರು: ಕೇರಳದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವ ಕಾರಣ ಮಂಗಳೂ ರು- ಕಾಸರಗೋಡು ಮಧ್ಯೆ ಒಂದು ವಾರಗಳ ಕಾಲ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. 
ನಾಳೆಯಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.
ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದ್ದು, ವಿದ್ಯಾರ್ಥಿ ನಿಲಯಗಳಲ್ಲಿಯೇ ಒಂದು ವಾರ ಕ್ವಾರಂಟೈನ್ ಆಗಬೇಕಿದೆ. ದ.ಕನ್ನಡದಲ್ಲಿ ಆ.10ರವರೆಗೆ ಧಾರ್ಮಿಕ ಸಭೆ ಸಮಾರಂಭ, ಕಾರ್ಯಕ್ರಮಗಳನ್ನು ನಡೆಸದಂತೆ ಸೂಚಿಸಲಾಗಿದೆ.
 
 
 
 
 
 
 
 
 
 
 

Leave a Reply