ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳ ಬಗ್ಗೆ ಕಾರ್ಯಾಗಾರ

ಉಡುಪಿ : ನಗರ ಪೊಲೀಸ್ ಠಾಣೆ ಮತ್ತು ಮಹಿಳಾ ಪೊಲೀಸ್ ಠಾಣೆ ಉಡುಪಿ ವತಿಯಿಂದ ‘ ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳ ‘ ಬಗ್ಗೆ ಕಾರ್ಯಾಗಾರವು ಬಡಗುಬೆಟ್ಟು ಸೊಸೈಟಿ ಜಗನ್ನಾಥ ಸಭಾಭವನದಲ್ಲಿ ಉಡುಪಿ ಪೊಲೀಸ್ ಉಪಾಧೀಕ್ಷಕ ಸುಧಾಕರ ಸದಾನಂದ ನಾಯಕ್ ಅವರ ಅಧ್ಯಕ್ಷತೆಯಲ್ಲಿ ರವಿವಾರ ಜರುಗಿತು .

ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಮಕ್ಕಳ ಹಕ್ಕುಗಳ ಮತ್ತು ಕಾಯ್ದೆಗಳನ್ನು ಇಲಾಖೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಠಾಣೆಗೆ ಬರುವ ಮಕ್ಕಳು ಮತ್ತು ಪೋಷಕರೊಂದಿಗೆ ಸೌಜನ್ಯವಾಗಿ ಮಾತಾಡಿಸಿ ಅವರ ಸಮಸ್ಯೆಗೆ ಪರಿಹಾರ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವಂತೆ ಕರೆ ನೀಡಿದರು .

ಮುಖ್ಯ ಅಥಿತಿ ನಗರ ಠಾಣೆಯ ನಿರೀಕ್ಷಕ ಪ್ರಮೋದ್ ಕುಮಾರ್ ಮಾತನಾಡಿ ಎಲ್ಲಾ ಠಾಣಾ ಸಿಬ್ಬಂದಿಗಳು ಮಕ್ಕಳ ಹಿತದೃಷ್ಟಿ ಅವರ ರಕ್ಷಣೆಗೆ ಒತ್ತು ಕೊಟ್ಟು ಆದ್ಯತೆ ನೀಡಿ ವಿಶೇಷವಾಗಿ ಪೋಕ್ಸೋ ಪ್ರಕರಣಗಳಲ್ಲಿ ವಿಳಂಬ ಮಾಡದೆ ಕೇಸ್ ದಾಖಲಿಸಿ ಸಂತ್ರಸ್ತರಿಗೆ ಮೂಲಭೂತ ಸೌಕರ್ಯ ಪುನರ್ವಸತಿ ಮತ್ತು ರಕ್ಷಣೆ ನೀಡಬೇಕು ಎಂದರು .ನಗರ ಠಾಣೆಯ ಉಪ ನಿರೀಕ್ಷಕರದ ಸಕ್ತಿವೇಲು ಉಪಸ್ಥಿತರಿದ್ದರು .

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಪೋಕ್ಸೋ ಕಾಯ್ದೆ ಬಗ್ಗೆ ಮಾತನಾಡಿ 18 ವರ್ಷದೊಳಗಿನ ಮಕ್ಕಳಿಗೆ ಸಂಬಂಧಿಸಿದ ಮಾನಸಿಕ ದೈಹಿಕ ಮತ್ತು ಲೈಂಗಿಕ ದೌರ್ಜನ್ಯದಂತಹ ಪ್ರಕರಣಗಳು ಬಂದಲ್ಲಿ ವಿಳಂಬ ಮಾಡದೆ ಅಂತಹ ಮಕ್ಕಳಿಗೆ ಸೂಕ್ತ ರಕ್ಷಣೆ ಹಾಗೂ ನ್ಯಾಯ ನೀಡಬೇಕು .ಕಾಯ್ದೆ ಗಿಂತ ಹೆಚ್ಚಾಗಿ ಮಕ್ಕಳ ಬಗ್ಗೆ ಪೊಲೀಸ್ ಸಿಬ್ಬಂದಿಗಳಿಗೆ ಕಾಳಜಿ ಮತ್ತು ಮಕ್ಕಳ ಮೇಲೆ ಪ್ರೀತಿ ಇರಬೇಕು ಆಗ ಮಾತ್ರ ಕಾಯ್ದೆಯ ಪೂರ್ಣ ಪ್ರಮಾಣದ ಅನುಷ್ಠಾನ ಸಾಧ್ಯ ಎಂದರು .ಅದೇ ರೀತಿ ಪೋಕ್ಸೋ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುತ್ತಿರುದು ಉತ್ತಮ ಬೆಳವಣಿಗೆ ಆಗಿದ್ದು ಮಕ್ಕಳಿಗೆ ನ್ಯಾಯ ದೊರಕಿದರೆ ಇಲಾಖೆಯ ಅಧಿಕಾರಿಗಳ ಪರಿಶ್ರಮ ಸಾರ್ಥಕವಾದಂತೆ ಎಂದರು 

ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳ ಬಗ್ಗೆ ನಗರ ಠಾಣೆಯ ಸಹಾಯಕ ಉಪನಿರೀಕ್ಷಕ ಜಯಕರ, ಹೆಡ್ ಕಾನ್ಸ್ಟೇಬಲ್ ಸುಷ್ಮಾ, ಜ್ಯೋತಿ ಮತ್ತು ಕಾನ್ಸ್ಟೆಬಲ್ ಅರುಣಾ ಮಾತನಾಡಿದರು .ಮಕ್ಕಳ ವಿಶೇಷ ಪೊಲೀಸ್ ಘಟಕ ದ ಅಧಿಕಾರಿಗಳಿದ್ದು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಿದರು .ನಗರ ಠಾಣೆಯ ಉಪನಿರೀಕ್ಷಕ ( ಅಪರಾಧ ) ವಾಸಪ್ಪ ನಾಯ್ಕ್ ಸ್ವಾಗತಿಸಿ ನಿರೂಪಿಸಿದರು .ನಗರ ಠಾಣೆಯ ಪ್ರೊಬೇಷನರಿ ಉಪನಿರೀಕ್ಷಕ ಅನಿಲ್ ವಂದಿಸಿದರು.

 
 
 
 
 
 
 
 
 
 
 

Leave a Reply