“ತುಳು ಲಿಪಿ ಮಂದಾರ” ಬಿಡುಗಡೆ

  1. ತುಳು ಭಾಷೆ / ತುಳು ಲಿಪಿ ಪುರಾತನ ಕಾಲಘಟ್ಟದಲ್ಲಿ ಉಪಯೋಗ ಆಗುತ್ತಿದ್ದು ದಕ್ಕೆ ಪುರಾವೆ ಗಳಿವೆ – ತುಳು ಲಿಪಿ ಮಂದಾರ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್.

ತಾಳೆಗರಿ ಉಪಯೋಗಿಸುತ್ತಿದ್ದ ಕಾಲಘಟ್ಟದಲ್ಲಿ ತುಳು ಲಿಪಿ ಬಳಕೆಯಾಗುತ್ತಿತ್ತು. ಪುರಾತನವಾದ ಐತಿಹಾಸಿಕ ಹಿನ್ನೆಲೆಯಿರುವ ತುಳು ಭಾಷೆ, ತುಳು ಲಿಪಿ ಮಧ್ವಾಚಾರ್ಯರ ಕಾಲಘಟ್ಟ ದಲ್ಲಿಯೂ ಬಳಕೆ ಮಾಡುತ್ತಿದ್ದರು ಎಂಬುದಕ್ಕೆ ಅಷ್ಠಮಠಗಳಲ್ಲಿ ಪುರಾವೆಗಳಿವೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಸೋಮವಾರದಂದು ಆಯೋಜಿಸಲಾದ “ತುಳು ಲಿಪಿ ಮಂದಾರ” ಬಿಡುಗಡೆ ಕಾರ್ಯಕ್ರಮದಲ್ಲಿ “ತುಳು ಲಿಪಿ ಮಂದಾರ”ವನ್ನು ಬಿಡುಗಡೆಗೊಳಿಸಿ ಮಾತನಾಡಿ ದರು. ಪ್ರಾಂತ್ಯಗಳು ಬದಲಾದಂತೆ ಆಡಳಿತ ವ್ಯವಸ್ಥೆಗಳಿಂದಾಗಿ ತುಳು ಲಿಪಿ ಜನಮಾನಸ ದಿಂದ ದೂರವಾಗಿದೆ. ಪ್ರಸಕ್ತ ದಿನಗಳಲ್ಲಿ ತುಳು ಭಾಷೆ ತುಳು ಲಿಪಿಯ ಬಗ್ಗೆ ಯುವ ಸಮು ದಾಯ ಮಾಡುತ್ತಿರುವ ಕೆಲಸ ಶ್ಲಾಘನೀಯ ವಾಗಿದೆ.

ವಿಧಾನ ಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತ ನಾಡಲು ಅವಕಾಶ ಕಲ್ಪಿಸಲು  ಮನವಿ ಮಾಡ ಲಾಗಿತ್ತು. ಆದರೆ ಸದನದಲ್ಲಿ ದಾಖಲಾಗುವ ಮಾಹಿತಿಗಳನ್ನು ದಾಖಲು ಮಾಡುವವರಿಗೆ ತುಳು ಭಾಷೆಯ ಅರಿವಿನ ಕೊರತೆಯಿರುವು ದರಿಂದ ಮುಂದಿನ ದಿನ ಗಳಲ್ಲಿ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವ ಭರವಸೆಯನ್ನು ಸಭಾಧ್ಯಕ್ಷರು ನೀಡಿರುತ್ತಾರೆ ಎಂದು ಹೇಳಿದ ಅವರು ತುಳು ಲಿಪಿ, ಭಾಷೆ ಬಗ್ಗೆ ಜೈ ತುಳುನಾಡು ಸಂಘ ಟನೆಯ ಈ ಪ್ರಯತ್ನ ಉತ್ತಮ ಬೆಳವಣಿಗೆ. ಜನಮಾನಸದಲ್ಲಿ ತುಳು ಲಿಪಿ ಮೂಡಿ ಬಂದು ಎಲ್ಲರೂ ಬಳಸಿಕೊಳ್ಳುವಂತಾಗಬೇಕು ಎಂದರು.

ಮೊಬೈಲ್ ಹಾಗೂ ಕಂಪ್ಯೂಟರ್ ಮೂಲಕವೂ ತುಳುಲಿಪಿಯನ್ನುಸುಲಭವಾಗಿ,ಸರಳವಾಗಿ ಬರೆಯಲು,ಕಲಿಯಲು ಮತ್ತು ಓದಲು ಅನುಕೂಲವಾಗುವಂತಹಾ,ತುಳುಲಿಪಿ ಯ ಫಾಂಟ್ ,ಇದಾಗಿದ್ದು,ಇದನ್ನು ಜೈ,ತುಳುನಾಡ್ (ರಿ) ಸಂಘಟನೆಯ ,ಸದಸ್ಯರಾದ ಪ್ರಹ್ಲಾದ್ ಪಿ.ತಂತ್ರಿಯವರು ಅಭಿವೃದ್ಧಿ ಪಡಿಸಿರುತ್ತಾರೆ.

ಈ ಸಂದರ್ಭದಲ್ಲಿ ತುಳು ಅಕಾಡೆಮಿಯ ಸದಸ್ಯ ರಾದ ಡಾll ಆಕಾಶ್ ರಾಜ್ ಜೈನ್, ತಾರಾ ಆಚಾರ್ಯ, ಜೈ ತುಳುನಾಡು ಸಂಘಟನೆಯ ಅಧ್ಯಕ್ಷರಾದ ಸುದರ್ಶನ್ ಸೂರತ್ಕಲ್, ಸದಸ್ಯ ರಾದ ಪ್ರಹ್ಲಾದ್ ಪಿ. ತಂತ್ರಿ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply