ಸಾರ್ವಜನಿಕರ ಆಕ್ರೋಶಕ್ಕೆ ಮಣಿದ ಜಿಲ್ಲಾಡಳಿತ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ ಎಂಬ ಆದೇಶವನ್ನು ವಾಪಾಸ್ ಪಡೆದಿದೆ.
ಇಂದಿನಿಂದ ಎಡಿಜಿಪಿ ಅಲೋಕ್ ಕುಮಾರ್ ಅವರು ನಾಳೆಯಿಂದ ಬೈಕ್ ನಲ್ಲಿ ಹಿಂಬದಿ ಸವಾರರಿಗೆ ಸಂಚರಿಸಲು ಅವಕಾಶ ಇಲ್ಲ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ನಿಯಮ ಅನ್ವಯವಾಗಲಿದೆ ಎಂದಿದ್ದರು. ಅಲ್ಲಗೇ 18 ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಇದರಲ್ಲಿ ವಿನಾಯಿತಿ ನೀಡಲಾಗಿದೆ. ಪುರುಷ ಹಿಂಬದಿ ಸವಾರರಿಗೆ ಈ ನಿಯಮ ಅನ್ವಯವಾಗಲಿದೆ ಎಂದಿದ್ದರು.
ಈ ಆದೇಶಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಈ ಆದೇಶವನ್ನು ಮಂಗಳೂರು ನಗರ ಪೊಲೀಸ್ ಆಯಕ್ತರು ಹಿಂದಕ್ಕೆ ಪಡೆದಿದ್ದಾರೆ.
ಇದೇ ವೇಳೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿರುವ ನಿಷೇಧಾಜ್ಞೆಯನ್ನು (ಸೆಕ್ಷನ್ 144) ಆಗಸ್ಟ್ 8ರ ಬೆಳಿಗ್ಗೆ 6 ಗಂಟೆಯ ವರೆಗೆ ವಿಸ್ತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.