ದೈವಗಳ ಕ್ಷೇತ್ರದಲ್ಲಿ ನಡೆಯುವ 25 ಲಕ್ಷ ರೂಪಾಯಿ ಅಭಿವೃದ್ಧಿ ಯೋಜನೆಗೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

ಮಂಗಳೂರು : ನಗರದ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ 20 ನೇ ತಿರುವೈಲ್ ವಾರ್ಡಿನ ವಾಮಂಜೂರಿನ ಪರಾರಿ ಎಂಬಲ್ಲಿ ಶ್ರೀ ಕೋರ್ದಬ್ಬು, ಚಾಮುಂಡಿ ಮತ್ತು ಪರಿವಾರ ದೈವಗಳ ಕ್ಷೇತ್ರದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ 25 ಲಕ್ಷ ರೂಪಾಯಿ ಅನುದಾನದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ಕೆ ಶಾಸಕ ಡಾ.ವೈ ಭರತ್ ಶೆಟ್ಟಿ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿದರು. 

ಇದೇ ವೇಳೆ ಪಾಲಿಕೆಯ ಸದಸ್ಯರ ನಿಧಿಯಿಂದ 7 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾದ ರಸ್ತೆಯನ್ನು ಲೋಕಾರ್ಪಣೆಗೊಳಿಸಿದರು. ಶಾಸಕರೊಂದಿಗೆ ಮನಪಾ ಸ್ಥಳೀಯ ಸದಸ್ಯೆ ಹೇಮಲತಾ ರಘು ಸಾಲಿಯಾನ್, ಜಿಲ್ಲಾ ವಕ್ತಾರ ಜಗದೀಶ್ ಶೇಣವ,ಮಂಡಲ ಉಪಾಧ್ಯಕ್ಷ ಲಕ್ಷ್ಮಣ್ ಶೆಟ್ಟಿಗಾರ್, ಚಂದ್ರಶೇಖರ್ ಶೆಟ್ಟಿ, ಸಂದೇಶ್ ಶೆಟ್ಟಿ, ಯತಿರಾಜ್ ಶೆಟ್ಟಿ, ರವಿರಾಜ್ ಶೆಟ್ಟಿ,ಓಂ ಪ್ರಕಾಶ್ ಶೆಟ್ಟಿ, ಲಕ್ಷ್ಮಿ, ಲಕ್ಷ್ಮಣ್ ಕೊಟ್ಟಾರಿ, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply