ಮಂಗಳೂರು : ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಾಲಯದ ಆವರಣದಲ್ಲಿ ಅದ್ಧೂರಿಯಿಂದ 4 ಮದುವೆ ನಡೆದಿದೆ.ಮಂಗಳೂರು ಎಸಿ, ಮನಪ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕೊರೊನಾ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ಜಿಲ್ಲಾಡಳಿತದ ಆದೇಶಕ್ಕೆ ಬೆಲೆ ಕೊಡದೆ ಮದುವೆ ಸಮಾರಂಭ ನಡೆಯುತ್ತಿದೆ ಎಂಬ ದೂರು ಬಂದ ಹಿನ್ನೆಲೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.ಇನ್ನು ದೇವಾಲಯದ ಹೊರಗೆ 40 ಕ್ಕೂ ಹೆಚ್ಚು ಕಾರುಗಳು ನಿಂತಿರುವುದು ಕಂಡು ಬಂದಿದ್ದು, ಲಾಕ್ಡೌನ್ ನಿಯಮ ಉಲ್ಲಂಘಿಸಿದವರನ್ನು ಅಧಿಕಾರಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೊರೊನಾ ಪ್ರಕರಣಗಳು ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಟ್ರೋಲ್ಗೆ ಬರದಿದ್ದರೂ ಜನರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರುವುದು ಕಂಡುಬಂದಿದೆ ಎನ್ನಲಾಗಿದೆ.