ಮೀನು ಹಿಡಿಯಲು ಹೋದ ವ್ಯಕ್ತಿ ಪಳ್ಳ ಕೆರೆಗೆ ಬಿದ್ದು ಮೃತ್ಯು

ಮಣಿಪಾಲ: ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ವರದಿಯಾಗಿದ್ದು ಇವರ ಮೃತದೇಹ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಹಾಗೂ ಮಣಿಪಾಲ ಠಾಣಾಧಿಕಾರಿ ರಾಜಶೇಖರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.

 
 
 
 
 
 
 
 
 
 
 

Leave a Reply