ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಡೆಯುತ್ತಿದ್ದ ಅದ್ದೂರಿ ಸಾರ್ವಜನಿಕ ಗಣೇಶೋತ್ಸವಕ್ಕೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಕೈಗೊಳ್ಳಲಾಗಿದ್ದುಜಿಲ್ಲೆಯಲ್ಲಿ ಈ ಬಾರಿ ಸರಳ ಗಣೇಶೋತ್ಸವ ಆಚರಣೆ ಇರಲಿದೆ.ಪೆಂಡಾಲ್ ಹಾಕಿ ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಇಲ್ಲ.
ಜಿಲ್ಲೆಯಲ್ಲಿ ಮೂರು ದಿನಗಳಿಗೆ ಗಣೇಶೋತ್ಸವ ಸೀಮಿತವಾಗಿರಲಿದೆ. ದೇವಸ್ಥಾನ, ಸಮುದಾಯ ಭವನ ಹಾಗೂ ಮನೆಗಳಲ್ಲಿ ಮಾತ್ರ ಸರಳ ಆಚರಣೆಗೆ ಅವಕಾಶವಿದ್ದು, ಜಿಲ್ಲೆಯಲ್ಲಿ ಈ ಸೂಚನೆ ನೀಡಲಾಗಿದೆ.