ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ ಸೂಕ್ತ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸಲು, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಅವಶ್ಯಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರೆ ಉದ್ದೇಶಗಳಿಗೆ ಸಾರ್ವಜನಿಕರ ಸಂಚಾರವನ್ನು ತಡೆಯಲಾಗಿದೆ.

ಈ ವೇಳೆ ಯಾವುದೇ ಮೈಕ್ರೋಫೈನಾನ್ಸ್ ಗಳು,ಸಹಕಾರಿ ಸಂಘಗಳು,ಇತರೆ ಹಣಕಾಸು ಸಂಸ್ಥೆಗಳ ಸಾಲ ವಸೂಲಾತಿದಾರರು, ಮನೆ ಮನೆಗೆ ಭೇಟಿ ನೀಡುವುದಕ್ಕೆ ಜೂನ್ 6 ರವರೆಗೆ ನಿರ್ಬಂಧ ಹೇರಲಾಗಿದೆ.

ಈ ಯಾವುದೇ ಸಂಸ್ಥೆಗಳು ಸಾಲಗಾರರಿಗೆ ಸಾಲ ಮರು ಪಾವತಿ ಮಾಡಲು ಒತ್ತಡ ಹೇರುವಂತಿಲ್ಲ. ಸಾಲ ಮರುಪಾವತಿ ಮಾಡಲು ಒತ್ತಡ ಹೇರಿದ್ದಲ್ಲಿ , ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳಲು ರುದ್ರೇಶ್ ಡಿ.ಸಿ , ಲೀಡ್ ಡಿಸ್ಟ್ರಿಕ್ಟ್ ಮ್ಯಾನೆಜರ್, 9449860858, ಪ್ರವೀಣ್ ಬಿ.ನಾಯಕ್, ಸಹಕಾರ ಸಂಘಗಳ ಉಪನಿಬಂಧಕರು 9448633338 ಇವರನ್ನು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.

ನೋಡೆಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾದ ಸಾಲ ಮರುಪಾವತಿ ಕುರಿತು ದೂರುಗಳಿಗೆ ತಕ್ಷಣವೇ ಸ್ಪಂದಿಸುವುದು.ಮೈಕ್ರೋ ಫೈನಾನ್ಸ್, ಸಹಕಾರಿ ಸಂಘಗಳು, ಇತರೆ ಹಣಕಾಸು ಸಂಸ್ಥೆಗಳು ಹಾಗೂ ಸಾರ್ವಜನಿಕರ ಮಧ್ಯೆ ಸಮನ್ವಯತೆಯಿಂದ ಯಾವುದೇ ಗೊಂದಲ ಉಂಟಾಗದಂತೆ ಸಾರ್ವಜನಿಕ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 
 
 
 
 
 
 
 
 
 
 

Leave a Reply