ಕೃಷಿ ಚಟುವಟಿಕೆಗಳಲ್ಲಿ ಸ್ವಾವಲಂಬಿಗಳಾಗಬೇಕು – ಶ್ರೀ ಮುರಳಿ ಕಡೆಕಾರು

ಮಿಲಾಗ್ರಿಸ್ ಕಾಲೇಜು, ಕಲ್ಯಾಣಪುರ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಗುರುವಾರದಂದು ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಅಂಗವಾಗಿ ಸಂತೆಕಟ್ಟೆ ಪರಿಸರದ ನಯಂಪಳ್ಳಿ ಮತ್ತು ಕೊಡಂಕೂರು ಪರಿಸರದ ಗದ್ದೆಯಲ್ಲಿ ನಾಟಿ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. 
ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇವರ ಸಹಯೋಗದಲ್ಲಿ ಆಯೋಜಿಸಿದ ಈ ಕಾರ‍್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಇವರು 
ಚಾಲನೆ ನೀಡಿದರು. 
ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಪ್ರಧಾನ ಕಾರ‍್ಯದರ್ಶಿಗಳಾದ ಮುರಳಿ ಕಡೆಕಾರ್ ಇವರು ಉಪಸ್ಥಿತರಿದ್ದು ಯುವ ಜನತೆಗೆ ಕೃಷಿ ಚಟುವಟಿಕೆಯು ಈ ದಿನಗಳಲ್ಲಿ ಅತೀ ಅಗತ್ಯವಾಗಿದ್ದು, ಅದರಲ್ಲಿ ತೊಡಗಿಸಿಕೊಳ್ಳಬೇಕು, ಅಲ್ಲದೆ ಕೃಷಿ ಚಟುವಟಿಕೆಗಳಲ್ಲಿ ಬೇರೆ ಬೇರೆ ರಾಜ್ಯಗಳಿಂದ ಕಾರ್ಮಿಕರನ್ನು ಕರೆಸಿಕೊಳ್ಳುವುದರ ಬದಲಾಗಿ ಸ್ವತ: ನಾವೇ ಕೃಷಿ ಕಾರ‍್ಯದಲ್ಲಿ ತೊಡಗಿಸಿಕೊಂಡು ಸ್ವಾವಲಂಬಿಗಳಾಗಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.
ಸ್ಥಳೀಯ ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಕಾಲೇಜಿನ ಹಳೇ ವಿದ್ಯಾರ್ಥಿಉಮೇಶ್ ಶೆಟ್ಟಿ ಇವರು ಸಹಕರಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ ವಿನ್ಸೆಂಟ್ ಆಳ್ವ  ಉಪಸ್ಥಿತರಿದ್ದು,  ಸ್ವಯಂಸೇವಕರ ಜೊತೆ ಕೆಲಸ ತಮ್ಮನ್ನು ತೊಡಗಿಸಿಕೊಂಡರು.  
ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕ ಡಾ ಜಯರಾಮ್ ಶೆಟ್ಟಿಗಾರ್, ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್, ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಮತಿ ಅನುಪಮಾ ಜೋಗಿ ಮತ್ತು ಶ್ರೀ ಮೆಲ್ಸನ್ ಡಿಸೋಜ ಇವರು ಉಪಸ್ಥಿತರಿದ್ದರು. ಎನ್ ಎಸ್ ಎಸ್ ಘಟಕದ ನಾಯಕರು ಹಾಗೂ ಸ್ವಯಂಸೇವಕರು ಈ ಕೆಲಸವನ್ನು ನಡೆಸಿಕೊಟ್ಟರು.  
 
 
 
 
 
 
 
 
 
 
 

Leave a Reply