ಹೃದಯಘಾತದಿಂದ ಎರಡನೇ ತರಗತಿಯ ವಿದ್ಯಾರ್ಥಿ ಸಾವು!

ಎರಡನೇ ತರಗತಿಯ ವಿದ್ಯಾರ್ಥಿ ಹೃದಯಘಾತದಿಂದ ಮೃತ ಪಟ್ಟ ಘಟನೆ ಸುಳ್ಯ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ಕುಂಟಿಕಾನ ನಿವಾಸಿ ಚಂದ್ರಶೇಖರ್ ರವರ ಪುತ್ರ ಮೋಕ್ಷಿತ್ ಕೆ. ಸಿ ಮೃತ ಪಟ್ಟ ಬಾಲಕ. ಎಂದಿನಂತೆ ಬೆಳಿಗ್ಗೆ ಶಾಲೆಗೆ ತೆರಳಿದ್ದ ಮೋಕ್ಷಿತ್ ಗೆ ಮದ್ಯಾಹ್ನ ದ ಸಮಯ ಜ್ವರ ಶುರುವಾಗಿತ್ತು. ಕೂಡಲೇ ಶಿಕ್ಷಕರು ಬಾಲಕನ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದರು. ತಕ್ಷಣವೇ ಶಾಲೆಗೆ ತೆರಳಿದ ಬಾಲಕನ ತಂದೆ ಚಂದ್ರಶೇಖರ ಆಚಾರ್ಯ, ಅದೇ ವೇಳೆಗೆ ಬಾಲಕ ನಿಂತಲ್ಲಿಯೇ ಕುಸಿದು ಬಿದ್ದಿದ್ದಾನೆ. ಬಾಲಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವರದಿಯಾಗಿದೆ.

 
 
 
 
 
 
 
 
 
 
 

Leave a Reply