ಮಣಿಪಾಲ ಪೋಸ್ಟ್ ಆಫೀಸ್ ಬಳಿ ರಸ್ತೆ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ – ಪ್ರಗತಿ ಪರಿಶೀಲನೆ

ಉಡುಪಿ : ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಮಣಿಪಾಲ ಪೋಸ್ಟ್ ಆಫೀಸ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದ ಸಿ.ಆರ್. ಎಫ್ ಯೋಜನೆಯಿಂದ 4 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು ಇಂದು ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.

ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಕಲ್ಪನಾ ಸುಧಾಮ, ಮಂಜುನಾಥ್ ಮಣಿಪಾಲ, ಅಶೋಕ್ ನಾಯ್ಕ್ ಮತ್ತು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್ ಹಾಗೂ ಗುತ್ತಿಗೆದಾರರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply